Advertisement

ಬಿಜೆಪಿ ಅಭ್ಯರ್ಥಿ ವಿರುದ್ಧ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

02:10 PM Nov 16, 2019 | Team Udayavani |

ಹಾವೇರಿ: ರಾಣಿಬೆನ್ನೂರು ವಿಧಾನಸಭೆ ಕ್ಷೇತ್ರದಲ್ಲಿ ಉಪಚುನಾವಣೆಗೆ ಬಿಜೆಪಿಯಿಂದ ಅರುಣ ಕುಮಾರ ಪೂಜಾರ ಅವರಿಗೆ ಟಿಕೆಟ್ ಘೋಷಿಸಿರುವುದಕ್ಕೆ ಬಿಜೆಪಿಯಲ್ಲಿ ಭಾರಿ ವಿರೋಧ ವ್ಯಕ್ತವಾಗಿದ್ದು ಕಾರ್ಯಕರ್ತರು ಶನಿವಾರ ಬಿಜೆಪಿ ಕಚೇರಿ ಎದುರೇ ಟಯರ್‌ಗೆ ಬೆಂಕಿ ಹಚ್ಚಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

Advertisement

ಅರುಣ ಕುಮಾರ ಪೂಜಾರ ಅವರಿಗೆ ಟಿಕೆಟ್ ನೀಡಿರುವುದನ್ನು ಖಂಡಿಸಿ ಪ್ರತಿಭಟನೆ ಮೂಲಕ ಆಕ್ರೋಶ ಹೊರಹಾಕಿದವರಲ್ಲಿ ಕ್ಷೇತ್ರದ ಪ್ರಬಲ ಟಿಕೆಟ್ ಆಕಾಂಕ್ಷಿ ಡಾ. ಬಸವರಾಜ ಕೇಲಗಾರ ಅವರ ಬೆಂಬಲಿಗರೇ ಹೆಚ್ಚಾಗಿದ್ದರು. ‘’ಇನ್ನೂ ಕಾಲಮಿಂಚಿಲ್ಲ. 48 ಗಂಟೆಗಳ ಸಮಯಾವಕಾಶವಿದೆ. ಕೂಡಲೇ ಪಕ್ಷದ ಹೈಕಮಾಂಡ್ ಅಭ್ಯರ್ಥಿಯನ್ನು ಬದಲಾಯಿಸಿ ಡಾ. ಬಸವರಾಜ ಕೇಲಗಾರ ಅವರಿಗೆ ಟಿಕೆಟ್ ನೀಡಬೇಕು’’ ಎಂದು ಒತ್ತಾಯಿಸಿದರು.

ಟಿಕೆಟ್ ಘೋಷಣೆ ಹಿನ್ನೆಲೆಯಲ್ಲಿ ಕಾರ್ಯಕರ್ತರ ಸಭೆ ನಡೆಸಲು ಆಗಮಿಸಿದ್ದ ಪಕ್ಷದ ಜಿಲ್ಲಾಧ್ಯಕ್ಷ ಶಿವರಾಜ ಸಜ್ಜನರ ಹಾಗೂ ಪಕ್ಷದ ಇತರ ಮುಖಂಡರ ಸಮ್ಮುಖದಲ್ಲೇ ಭಾರಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಡಾ. ಬಸವರಾಜ ಕೇಲಗಾರ ಅವರಿಗೆ ಅನ್ಯಾಯವಾದರೆ ಸಹಿಸುವುದಿಲ್ಲ ಎಂಬ ಎಚ್ಚರಿಕೆಯನ್ನೂ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next