Advertisement

ಬ್ಯಾಂಕ್‌ ವಿಲೀನ ನಿರ್ಧಾರ ವಿರೋಧಿಸಿ ಪ್ರತಿಭಟನೆ 

05:19 PM Oct 12, 2018 | Team Udayavani |

ಹುಬ್ಬಳ್ಳಿ: ಕೇಂದ್ರ ಸರಕಾರ ವಿಜಯಾ ಬ್ಯಾಂಕ್‌, ಬ್ಯಾಂಕ್‌ ಆಫ್‌ ಬರೋಡ ಹಾಗೂ ದೇನಾ ಬ್ಯಾಂಕ್‌ ವಿಲೀನಗೊಳಿಸುವ ನಿರ್ಧಾರ ಕೈಗೊಂಡಿರುವುದನ್ನು ವಿರೋಧಿಸಿ ಯುನೈಟೆಡ್‌ ಫೋರಂ ಆಫ್‌ ಬ್ಯಾಂಕ್‌ ಯುನಿಯನ್ಸ್‌ ವತಿಯಿಂದ ಇಲ್ಲಿನ ಸರ್‌ ಸಿದ್ದಪ್ಪ ಕಂಬಳಿ ಮಾರ್ಗದ ವಿಜಯಾ ಬ್ಯಾಂಕ್‌ ಪ್ರಾದೇಶಿಕ ಕಚೇರಿ ಎದುರು ಗುರುವಾರ ಪ್ರತಿಭಟನೆ  ನಡೆಸಲಾಯಿತು.

Advertisement

ಸಂಘದ ಅಧ್ಯಕ್ಷ ಸ್ಟಿಫನ್‌ ಜಯಚಂದ್ರ ಮಾತನಾಡಿ, ಬ್ಯಾಂಕ್‌ಗಳ ವಿಲೀನದಿಂದ ಅನೇಕ ಶಾಖೆಗಳು ಮುಚ್ಚಲಿವೆ. ಇದರಿಂದ ಗ್ರಾಹಕರಿಗೆ ತುಂಬಾ ತೊಂದರೆಯಾಗಲಿದೆ. ಈ ನೀತಿಯಿಂದ ಮಧ್ಯಮ ವರ್ಗದ ಗ್ರಾಹಕರಿಗೆ ಲಾಭವಾಗುವುದಿಲ್ಲ. ಕೇಂದ್ರ ಸರಕಾರದ ಬ್ಯಾಂಕ್‌ಗಳ ವಿಲೀನ ನೀತಿಯನ್ನು ಸಂಘ ತೀವ್ರವಾಗಿ ಖಂಡಿಸುತ್ತದೆ. ವಿಲೀನ ಪ್ರಕ್ರಿಯೆ ವಾಪಸ್‌ ಪಡೆಯಬೇಕು. ಇಲ್ಲವಾದರೆ ಪ್ರತಿಭಟನೆ ಮುಂದುವರಿಸಲಾಗುವುದು ಎಂದರು.

ಅಖಿಲ ಭಾರತ ವಿಜಯಾ ಬ್ಯಾಂಕ್‌ ಅಧಿಕಾರಿಗಳ ಒಕ್ಕೂಟದ ಕ್ಷೇತ್ರೀಯ ಕಾರ್ಯದರ್ಶಿ ಚಿದಂಬರ ಗೋಠೆ ಸೇರಿದಂತೆ ವಿಜಯಾ ಬ್ಯಾಂಕ್‌, ಬ್ಯಾಂಕ್‌ ಆಫ್‌ ಬರೋಡಾ, ದೇನಾ ಬ್ಯಾಂಕ್‌ನ ಸಿಬ್ಬಂದಿ, ಸಂಘದ ಸದಸ್ಯರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next