Advertisement

ಪ್ರಚಾರಕ್ಕಾಗಿ ಬಿಜೆಪಿಯಿಂದಜಾರ್ಜ್‌ ವಿರುದ್ಧ ಪ್ರತಿಭಟನೆ

07:49 AM Sep 21, 2017 | Team Udayavani |

ಬೆಂಗಳೂರು: ಕೆ.ಜೆ.ಜಾರ್ಜ್‌ ವಿರುದ್ಧ ಬಿಜೆಪಿ ನಾಯಕರು ಎಷ್ಟೇ ದಿನ ಅಹೋರಾತ್ರಿ ಧರಣಿ ನಡೆಸಿದರೂ ಅವರು ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಸ್ಪಷ್ಟಪಡಿಸಿದ್ದಾರೆ. ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಬಿಜೆಪಿಯವರು ಜಾರ್ಜ್‌ ವಿರುದ್ಧ ಪ್ರಚಾರಕ್ಕಾಗಿ ಪ್ರತಿಭಟಿಸುತ್ತಿದ್ದಾರೆ. ಡಿ.ಕೆ. ರವಿ ಸಾವಿನ ಸಂದರ್ಭದಲ್ಲಿಯೂ ಅವರ ರಾಜೀನಾಮೆಗೆ ಆಗ್ರಹಿಸಿದ್ದರು. ಆಗ ರಾಜ್ಯ ಸರ್ಕಾರ  ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿತ್ತು. ನಂತರ ಡಿ.ಕೆ.ರವಿ ಸಾವಿನ ಪ್ರಕರಣದಲ್ಲಿ ಜಾರ್ಜ್‌ ಪಾತ್ರವಿಲ್ಲ ಎಂದು ಗೊತ್ತಾಗಿದೆ.

Advertisement

ಈಗ ಡಿವೈಎಸ್‌ಪಿ ಗಣಪತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೊರ್ಟ್‌ ಸಿಬಿಐ ತನಿಖೆಗೆ ಆದೇಶಿಸಿದೆ. ಅದರಲ್ಲಿ ಜಾರ್ಜ್‌ ಪಾತ್ರದ ಬಗ್ಗೆ ಎಲ್ಲಿಯೂ ಪ್ರಸ್ತಾಪಿಸಿಲ್ಲ. ರಾಜ್ಯ ಬಿಜೆಪಿಯವರು ಕಾರಣವಿಲ್ಲದೇ ಜಾರ್ಜ್‌ ವಿರುದ್ಧ ಹೋರಾಟ ಮಾಡುವ ಬದಲು ಸಾಮಾನ್ಯರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದರು. ಬಿಜೆಪಿ ರಾಜ್ಯಾಧ್ಯಕ್ಷ ಯಡಿಯೂರಪ್ಪ ತಮ್ಮ ಮೇಲಿನ ಪ್ರಕರಣಗಳಿಂದ ಮುಕ್ತರಾಗಿ ಬಂದು ಹೋರಾಡಲಿ. ಕೇಂದ್ರದಲ್ಲಿ ಅನೇಕ ಸಚಿವರ ವಿರುದ್ಧ ಪ್ರಕರಣಗಳು ದಾಖಲಾಗಿದ್ದು, ಅವರಿಂದ ರಾಜೀನಾಮೆ ಪಡೆಯುವಂತೆ ಕೇಂದ್ರದ ಮೇಲೆ ಒತ್ತಡ ಹೇರಲಿ ಎಂದು ದಿನೇಶ್‌ ಗುಂಡೂರಾವ್‌ ತಿರುಗೇಟು ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next