Advertisement

ಬಿಜೆಪಿ ನಾಯಕರ ಭಾವಚಿತ್ರಕ್ಕೆ ಮಸಿ ಬಳಿದು ಪ್ರತಿಭಟನೆ

07:31 AM Jan 17, 2019 | Team Udayavani |

ಕಂಪ್ಲಿ: ಕಾಂಗ್ರೆಸ್‌ ಮತ್ತು ಜೆಡಿಎಸ್‌ ಸರ್ಕಾರ ಅಭದ್ರಗೊಳಿಸಲು ಮುಂದಾಗಿರುವ ಬಿಜೆಪಿ ನಾಯಕರ ಭಾವಚಿತ್ರಗಳಿಗೆ ಮಸಿ ಬಳಿಯುವ ಮೂಲಕ ಕಾಂಗ್ರೆಸ್‌ ಮುಖಂಡರು ಹಾಗೂ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದರು.

Advertisement

ಸಂಸದ ವಿ.ಎಸ್‌.ಉಗ್ರಪ್ಪ, ಜಿಲ್ಲಾ ಕಾಂಗ್ರೆಸ್‌ ಮುಖಂಡರು ಪಟ್ಟಣದ ಬೆಳಗೋಡು ಅಗಸಿಯಲ್ಲಿ ಕಂಪ್ಲಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್‌ ಸಮಿತಿ ಬಿಜೆಪಿ ವಿರುದ್ಧ ಆಯೋಜಿಸಿದ್ದ ಪ್ರತಿಭಟನೆಯಲ್ಲಿ ಭಾಗವಹಿಸಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಪ್ರಧಾನಿ ನರೇಂದ್ರ ಮೋದಿ, ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್‌.ಯಡಿಯೂರಪ್ಪ ಅವರ ಭಾವಚಿತ್ರಗಳಿಗೆ ಮಸಿ ಬಳಿಯುವ ಮೂಲಕ ಪ್ರತಿಭಟನೆ ನಡೆಸಿದರು.

ಈ ಸಂದರ್ಭಲ್ಲಿ ಮಾತನಾಡಿದ ಸಂಸದ ವಿ.ಎಸ್‌.ಉಗ್ರಪ್ಪ, ರಾಜ್ಯದ ಬಿಜೆಪಿ ಮುಖಂಡರು ಹಾಗೂ ಶಾಸಕರು ಅಧಿಕಾರಕ್ಕಾಗಿ ಹಪಾಹಪಿಸುತ್ತಿದ್ದು, ಸುಭದ್ರವಾಗಿರುವ ಸಮ್ಮಿಶ್ರ ಸರ್ಕಾರ ಅಭದ್ರಗೊಳಿಸುವ ನೀಚಕೆಲಸಕ್ಕೆ ಕೈಹಾಕಿದ್ದು, ಕಾಂಗ್ರೆಸ್‌ ಶಾಸಕರಿಗೆ ಆಸೆ ಆಮೀಷಗಳಿಂದ ಸೆಳೆಯುವ ಕೆಟ್ಟ ಕೆಲಸ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಸಿ.ಆರ್‌.ಹನುಮಂತ ಮಾತನಾಡಿದರು. ಜಿಲ್ಲಾ ಯುವ ಕಾಂಗ್ರೆಸ್‌ ಗ್ರಾಮೀಣ ಅಧ್ಯಕ್ಷ ನಾಗರಾಜ, ಕೆ.ತಿಮ್ಮಯ್ಯ, ಕಾಂಗ್ರೆಸ್‌ ಜಿಲ್ಲಾಧ್ಯಕ್ಷ ಬಿ.ವಿ.ಶಿವಯೋಗಿ, ಹಬೀಬ್‌ ರೆಹಮಾನ್‌, ಕೆ.ರೇಣುಕಗೌಡ, ಎ.ರೇಣುಕಪ್ಪ, ಎಂ.ಗೋಪಾಲ್‌, ಮೋಹಿನುದ್ದೀನ್‌ ಚೌದರಿ ಇನ್ನಿತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next