Advertisement

ಸಿಸಿಬಿ ಕಚೇರಿ ಎದುರು ಪ್ರತಿಭಟನೆ

07:01 AM Jun 13, 2019 | Team Udayavani |

ಬೆಂಗಳೂರು: ಐಎಂಎ ಸಂಸ್ಥೆಯ ವಂಚನೆ ಪ್ರಕರಣದ ತನಿಖೆ ಚುರುಕುಗೊಂಡಿರುವ ಹಿನ್ನೆಲೆಯಲ್ಲಿ ಜಯನಗರದ 9ನೇ ಬ್ಲಾಕ್‌ನಲ್ಲಿರುವ ಎಐಎಂಎಂಎಸ್‌ ವೆಂಚರ್ಸ್‌ ಕಂಪನಿಯಿಂದ ವಂಚನೆಗೊಳಗಾಗಿರುವ ಹೂಡಿಕೆದಾರರು ಬುಧವಾರ ಸಿಸಿಬಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Advertisement

ಮಂಗಳವಾರ ಬೆಳಗ್ಗೆ 11 ಗಂಟೆ ಸುಮಾರಿಗೆ ನೂರಕ್ಕೂ ಹೆಚ್ಚು ಮಂದಿ ಹೂಡಿಕೆದಾರರು ಸಿಸಿಬಿ ಕಚೇರಿ ಎದುರು ಜಮಾಯಿಸಿ ಪೊಲೀಸರು ಹಾಗೂ ಸಂಸ್ಥೆಯ ಅಧಿಕಾರಿಗಳ ವಿರುದ್ಧ ಘೋಷಣೆ ಕೂಗಿದರು. ಸಿಸಿಬಿ ಪೊಲೀಸರು ಹೀಗಾಗಲೇ ಪ್ರಕರಣದಲ್ಲಿ ಐವರು ಆರೋಪಿಗಳನ್ನು ಬಂಧಿಸಿದ್ದು, ಆರೋಪಿಗಳು ಜಾಮೀನು ಪಡೆದು ಹೊರಗಡೆ ಬಂದಿದ್ದಾರೆ.

ಆದರೆ ಇದುವರೆಗೂ ಯಾರಿಗೂ ಹಣ ವಾಪಸ್‌ ಬಂದಿಲ್ಲ. ಹೀಗಾಗಿ ಸಿಸಿಬಿ ಹೆಚ್ಚುವರಿ ಪೊಲೀಸ್‌ ಆಯುಕ್ತ ಅಲೋಕ್‌ ಕುಮಾರ್‌ ಸ್ಥಳಕ್ಕೆ ಬರುವವರೆಗೂ ಹೋಗುವುದಿಲ್ಲ ಎಂದು ಪ್ರತಿಭಟನಾಕಾರರು ಪಟ್ಟು ಹಿಡಿದಿದ್ದರು. ನಂತರ ಸ್ಥಳಕ್ಕೆ ಬಂದ ಸಿಸಿಬಿ ಎಸಿಪಿ ಲಕ್ಷ್ಮಿನಾರಾಯಣ್‌ ಪ್ರತಿಭಟನಾಕಾರರ ಅಹವಾಲು ಸ್ವೀಕರಿಸಿ, ಮನವೊಲಿಸಿ ಸ್ಥಳದಿಂದ ಕಳುಹಿಸಿದರು.

ಆರೋಪಿತ ಸಂಸ್ಥೆ ಎಐಎಂಎಂಎಸ್‌ ವೆಂಚರ್ಸ್‌ ಲಕ್ಷಕ್ಕೆ ಶೇ.10 ರಷ್ಟು ಲಾಭಾಂಶ ಕೊಡುವುದಾಗಿ ಹಣ ಪಡೆದು ವಂಚಿಸಿದೆ. ನೂರಾರು ಜನರಿಗೆ ಸುಮಾರು 14 ಕೋಟಿಯಷ್ಟು ವಂಚನೆ ಮಾಡಿದೆ ಎಂದು ಸಿಸಿಬಿ ಪೊಲೀಸರ ತನಿಖೆಯಲ್ಲಿ ಬೆಳಕಿಗೆ ಬಂದಿತ್ತು.

Advertisement

Udayavani is now on Telegram. Click here to join our channel and stay updated with the latest news.

Next