Advertisement

ರೈತರ ಮೇಲೆ ಕೇಂದ್ರದ ದೌರ್ಜನ್ಯಕ್ಕೆ ಖಂಡನೆ

12:57 PM Dec 04, 2020 | Suhan S |

ಬನಹಟ್ಟಿ: ಕೃಷಿ ಕಾಯ್ದೆ ವಿರೋಧಿಸಿ ವಿವಿಧ ರಾಜ್ಯಗಳಿಂದ ಪ್ರತಿಭಟನೆನಡೆಸಲು ನವದೆಹಲಿಗೆ ತೆರಳುತ್ತಿರುವ ರೈತರ  ಮೇಲೆ ಕೇಂದ್ರ ಸರ್ಕಾರ ದೌರ್ಜನ್ಯ ಎಸಗುತ್ತಿದೆ ಎಂದು ಆರೋಪಿಸಿ ಗುರುವಾರ ನಗರದ ಗಾಂಧಿ ವೃತ್ತದ ಬಳಿ ರೈತಸಂಘದ ಕಾರ್ಯಕರ್ತರು ರಸ್ತೆ ತಡೆ ನಡೆಸಿ ಪ್ರತಿಭಟನೆ ನಡೆಸಿದರು.

Advertisement

ಈ ಸಂದರ್ಭದಲ್ಲಿ ರೈತ ಸಂಘದ ಜಿಲ್ಲಾಧ್ಯಕ್ಷ ಬಸವಂತ ಕಾಂಬಳೆ ಮಾತನಾಡಿ, ಕಾರ್ಪೋರೇಟ್‌ ಕಂಪನಿಗಳಿಗೆ ಅನುಕೂಲ ಮಾಡಿಕೊಡುವ ಕೃಷಿ ಕಾಯ್ದೆ ವಿರುದ್ಧ ದೇಶಾದ್ಯಂತ ವಿರೋಧ ವ್ಯಕ್ತವಾಗುತ್ತಿದೆ. ಅದಕ್ಕೆ ಕೇಂದ್ರ ಸರ್ಕಾರಜಗ್ಗದ ಕಾರಣ ಸಹಸ್ರಾರು ಸಂಖ್ಯೆಯ ರೈತರು ನವದೆಹಲಿಯಲ್ಲಿ ಪ್ರತಿಭಟನೆಗೆ ಮುಂದಾಗಿದ್ದಾರೆ.ಆದರೆ, ಕೇಂದ್ರ ಸಕಾರ ಅಮಾಯಕ ರೈತರ ಮೇಲೆ ಲಾಠಿ ಪ್ರಹಾರ, ಜಲಫಿರಂಗಿ, ಅಶ್ರುವಾಯು ಸಿಡಿಸಿ ದೌರ್ಜನ್ಯ ಎಸಗಿದೆ. ಅವರಿಗೆ ದೆಹಲಿಯೊಳಗೆ ತೆರಳಲು ಬಿಡುತ್ತಿಲ್ಲ. ಇದು ಪ್ರಧಾನಿ ನರೇಂದ್ರ ಮೋದಿಯವರ ಸರ್ವಾಧಿಕಾರ ಧೋರಣೆ. ಉದ್ಧಟತನದ ಪರಮಾವಧಿ. ಅದಕ್ಕೆ ಭವಿಷ್ಯದಲ್ಲಿ ತಕ್ಕ ಬೆಲೆ ತೆರಬೇಕಾಗುತ್ತದೆ. ಮುಗ್ಧ ಮತದಾರರಹಾಗೂ ರೈತರನ್ನು ಪರೀಕ್ಷೆ ಮಾಡಬೇಡಿ ಎಂದು ಸರ್ಕಾರಕ್ಕೆ ಎಚ್ಚರಿಕೆ ನೀಡಿದರು.

ಕೃಷಿ ಕಾಯ್ದೆ ಅಗತ್ಯ ವಸ್ತುಗಳ ತಿದ್ದುಪಡಿ ಕಾಯ್ದೆ, ವಿದ್ಯುತ್‌ ತಿದ್ದುಪಡಿ ಮಸೂದೆ, ಕಾರ್ಮಿಕ ವಿರೋಧಿ  ಸಂಹಿತೆ ಕೂಡಲೇ ಹಿಂಪಡೆಯಬೇಕು. ಬೆಂಬಲ ಬೆಲೆ ನಿಗದಿಪಡಿಸುವ ಡಾ| ಎಂ.ಎಸ್‌.ಸ್ವಾಮಿನಾಥನ್‌ ನೇತೃತ್ವದ ಕೃಷಿ ಆಯೋಗದ ಸಲಹೆ ಜಾರಿಗೆ ತರಬೇಕು. ಕೋವಿಡ್‌ ಲಾಕ್‌ಡೌನ್‌ನಿಂದ ತೀವ್ರ ಸಂಕಷ್ಟಕ್ಕೊಳಗಾದ ಬಡತನ ರೇಖೆಗಿಂತ ಕೆಳಗಿರುವ ಎಲ್ಲ ಕುಟುಂಬಗಳಿಗೆ ಆರ್ಥಿಕ ನೆರವು  ನೀಡುವಂತೆ ಒತ್ತಾಯಿಸಿದರು.

ಮಹಾಲಿಂಗಪುರ ಘಟನೆಗೆ ಖಂಡನೆ: ಮಹಿಳೆಯ ಮೇಲೆ ಬಿಜೆಪಿ ಶಾಸಕ ಸಿದ್ದು ಸವದಿ ಹಾಗು ಬೆಂಬಲಿಗರಿಂದ ದೌರ್ಜನ್ಯ ಎಸಗಿರುವುದನ್ನು ರೈತ ಸಂಘವು ಖಂಡಿಸುತ್ತದೆ ಎಂದು ಜಿಲ್ಲಾಧ್ಯಕ್ಷ ಬಸವಂತ ಕಾಂಬಳೆ ಆಕ್ರೋಶ ವ್ಯಕ್ತಪಡಿಸಿದರು.

ರೈತ ಸಂಘದ ತಾಲೂಕಾಧ್ಯಕ್ಷ ಮಾಯಪ್ಪ ತುರಾದಿ, ಉಪಾಧ್ಯಕ್ಷ ಬಸು ಮೇಲೋಡಿ, ಅಯ್ಯಪ್ಪ ಸಸಾಲಟ್ಟಿ, ಸಿದ್ದು ಉಳ್ಳಾಗಡ್ಡಿ, ಭೀಮಸಿಎಡತ್ತಿ, ಶಿವು ನಾಗನೂರ, ದುಂಡಪ್ಪ ಕುಡಚಿ,ಅಲ್ಲಪ್ಪ ಬಳಗಾರ, ನಿಂಗಪ್ಪ ಗುರವ, ಶಿವನಿಂಗ ಮರೆಗುದ್ದಿ ಅನೇಕರಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next