Advertisement

ರೈತರ ಸಂಕಷ್ಟಕ್ಕೆ ಬಾರದ ಸರ್ಕಾರ: ಪರಿಹಾರ ನಿಧಿಗೆ ದೇಣಿಗೆ ನೀಡಲು ಭಿಕ್ಷೆ ಬೇಡಿ ಪ್ರತಿಭಟನೆ

02:26 PM Oct 23, 2020 | keerthan |

ರಾಯಚೂರು: ಸಂಕಷ್ಟದಲ್ಲಿರುವ ನೆರವಿಗೆ ಧಾವಿಸದ ಕೇಂದ್ರ ರಾಜ್ಯ ಸರ್ಕಾರಗಳ ನಡೆ ಖಂಡಿಸಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಕಾರ್ಯಕರ್ತರು ಪ್ರಧಾನಮಂತ್ರಿ ಪರಿಹಾರ ನಿಧಿಗೆ ದೇಣಿಗೆ ನೀಡಲು ಭಿಕ್ಷೆ ಎತ್ತುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

Advertisement

ನಗರದ ತೀನ್ ಕಂದಿಲ್ ಬಳಿ ಜೋಳಿಗೆ ಹಿಡಿದು ಜನರಿಂದ ಸಂಗ್ರಹಿಸಿದ ಪ್ರತಿಭಟನಾಕಾರರು, ಸರ್ಕಾರಗಳ ವಿರುದ್ಧ ಘೋಷಣೆ ಕೂಗಿ ಆಕ್ರೋಶ ಹೊರಹಾಕಿದರು.

ಅಲ್ಲಿಂದ ಪಟೇಲ್ ರಸ್ತೆ, ಚಂದ್ರಮೌಳೇಶ್ವರ ಮಾರ್ಗವಾಗಿ ಜಿಲ್ಲಾಧಿಕಾರಿ ಕಚೇರಿವರೆಗೂ ಪ್ರತಿಭಟನಾ ರ್ಯಾಲಿ ನಡೆಸಿದರು.

ಇದನ್ನೂ ಓದಿ:ಗುಡಿಸಲು ತೆರವು ಮಾಡಲು ಬಂದ ಅರಣ್ಯಾಧಿಕಾರಿಗಳ ಮೇಲೆ ಹಲ್ಲೆ: ಆರೋಪಿ ಪರಾರಿ

ಬೆಳೆ ಹಾನಿ ಪರಿಹಾರ, ಬೆಳೆ ವಿಮೆ, ಕಿಸಾನ್ ಸಮ್ಮಾನ್ ಸೇರಿದಂತೆ ರೈತರಿಗೆ ಯಾವುದೇ ಪರಿಹಾರ ಹಣ ಸಿಕ್ಕಿಲ್ಲ. ಸತತ ಮಳೆ, ಪ್ರವಾಹದಿಂದ ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೇಂದ್ರ ಸರ್ಕಾರ ರೈತ ವಿರೋಧಿ ಧೋರಣೆ ತಾಳಿದೆ. ಪರಿಹಾರ ಒದಗಿಸದ ಕಾರಣ ಪ್ರಧಾನಿ ಪರಿಹಾರ ನಿಧಿಗೆ ದೇಣಿಗೆ ಸಂಗ್ರಹಿಸಿ ನೀಡಲಾಗಿದೆ. ಸಂಘಟನೆಯ ನೂರಾರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next