Advertisement

ಬೆಳಗಾವಿಗೆ ಆಗಮಿಸಿದ ಡಿ.ಕೆ ಶಿವಕುಮಾರ್ ವಾಹನದ ಮೇಲೆ ಚಪ್ಪಲಿ ಎಸೆತ, ಕಲ್ಲು ತೂರಾಟ

04:10 PM Mar 28, 2021 | Team Udayavani |

ಬೆಳಗಾವಿ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಅವರು ಬೆಳಗಾವಿ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೆಯೇ ರಮೇಶ ಜಾರಕಿಹೊಳಿ ಬೆಂಬಲಿಗರು ಕಪ್ಪು ಬಾವುಟ ಹಿಡಿದು ಪ್ರತಿಭಟನೆ ನಡೆಸಿ, ಕಲ್ಲು ತೂರಾಟ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಘಟನೆ .

Advertisement

ವಿಮಾನ ನಿಲ್ದಾಣದಿಂದ ಡಿ.ಕೆ.ಶಿವಕುಮಾರ್ ತೆರಳುತ್ತಿದ್ದಂತೆಯೇ ಡಿಕೆಶಿ ಎಸ್ಕಾರ್ಟ್ ವಾಹನಗಳ ಮೇಲೆ ಹಗೂ ಡಿಕೆಶಿ ಕಾರಿನನ ಮೇಲೆ ಕಲ್ಲು ತೂರಾಟ ನಡೆಸಿ, ಚಪ್ಪಲಿ ಎಸೆದ ಘಟನೆಯೂ ನಡೆಯಿತು. ಡಿಕೆಶಿ ವಿರುದ್ಧ ಘೋಷಣೆ ಕೂಗಿದರು.

ಇದನ್ನೂ ಓದಿ:ಪ್ರತಿಭಟನೆಗಳು ಎಸ್ಐಟಿ ತನಿಖೆಯ ಮೇಲೆ ಯಾವುದೇ ಪ್ರಭಾವ ಬೀರುವುದಿಲ್ಲ: ಬಸವರಾಜ ಬೊಮ್ಮಾಯಿ

ಡಿಕೆ ಶಿವಕುಮಾರ್ ಬೆಂಬಲಿಗರ ವಾಹನಗಳ ಮೇಲೂ ಕಲ್ಲು ತೂರಾಟ ನಡೆಸಲಾಯಿತು. ಕಾರಿನ ಗಾಜುಗಳು ಪುಡಿಪುಡಿಯಾಗಿವೆ. ಸಾಂಬ್ರಾ ಗ್ರಾಮದ ಗೇಟ್ ಬಳಿ ಹೆಚ್ಚಿನ ಸಂಖ್ಯೆಯಲ್ಲಿ ಜಮಾವಣೆಗೊಂಡಿದ್ದರು. ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.

Advertisement

ಇದನ್ನೂ ಓದಿ: ಮಂದಿರ ಕಟ್ಟುವ ವರ್ಷದಲ್ಲೇ ಹೆಣ್ಣಿನ ಮೇಲೆ ದೌರ್ಜನ್ಯ; ರಾಮರಾಜ್ಯವೋ, ರಾವಣರಾಜ್ಯವೋ?: ಉಗ್ರಪ್ಪ

Advertisement

Udayavani is now on Telegram. Click here to join our channel and stay updated with the latest news.

Next