Advertisement

ಅಹೋರಾತ್ರಿ ಧರಣಿ: ಸದನಕ್ಕೆ ಹಾಸಿಗೆ, ದಿಂಬು ತರಲು ಕಾಂಗ್ರೆಸ್ ಸಿದ್ಧತೆ

02:25 PM Feb 17, 2022 | Team Udayavani |

ಬೆಂಗಳೂರು : ಸಚಿವ ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿರುವ ಕಾಂಗ್ರೆಸ್ ಶಾಸಕರ ರಾತ್ರಿ ವಾಸ್ತವ್ಯಕ್ಕಾಗಿ ಹಾಸಿಗೆ, ದಿಂಬುಗಳನ್ನು ತರಿಸುವುದಕ್ಕೆ ಸೂಚನೆ ನೀಡಲಾಗಿದೆ.

Advertisement

ಸದನದಲ್ಲಿ ಇಂದಿನಿಂದ ಅಹೋರಾತ್ರಿ ಧರಣಿ ನಡೆಸುವುದಕ್ಕೆ ಕಾಂಗ್ರೆಸ್ ಸಿದ್ಧತೆ ನಡೆಸಿದೆ. ಹೀಗಾಗಿ ಪರಿಷತ್ ಹಾಗು ವಿಧಾನಸಭೆ ಸದಸ್ಯರಿಗೆ ರಾತ್ರಿ ಮಲಗುವುದಕ್ಕೆ ಅಗತ್ಯವಾದ ಹಾಸಿಗೆ- ದಿಂಬುಗಳನ್ನು ತರಿಸುವಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ. ಜತೆಗೆ ಭೋಜನ ವ್ಯವಸ್ಥೆಗೂ ಸೂಚನೆ ನೀಡಲಾಗಿದೆ.

ಇಂದೇ ಅಂತ್ಯ ?
ಆದರೆ ಕಾಂಗ್ರೆಸ್ ನ ಈ ಕಾರ್ಯ ತಂತ್ರಕ್ಕೆ ಅವಕಾಶ ನೀಡದೇ ಇರಲು ಬಿಜೆಪಿ ಯೋಜನೆ ರೂಪಿಸಿದೆ. ಮಧ್ಯಾಹ್ನ ಮೂರು ಗಂಟೆಯ ನಂತರವೂ ಕಾಂಗ್ರೆಸ್ ಪ್ರತಿಭಟನೆ ಮುಂದುವರಿಸಿದರೆ ಅನಿರ್ದಿಷ್ಟಾವಧಿಯವರೆಗೆ ಸದನ ಮುಂದೂಡಲು ಸ್ಪೀಕರ್ ಚಿಂತನೆ ನಡೆಸಿದ್ದಾರೆ ಎಂದು ತಿಳಿದು ಬಂದಿದೆ.

ಅಹೋರಾತ್ರಿ ಧರಣಿಗೆ ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ರಮೇಶ್ ಕುಮಾರ್‌ವಿರೋಧ ವ್ಯಕ್ತಪಡಿಸಿದ್ದಾರೆ ಎಂದು ಹೇಳಲಾಗುತ್ತಿದೆ.

Advertisement

Udayavani is now on Telegram. Click here to join our channel and stay updated with the latest news.

Next