Advertisement

ಹಗರಣಗಳು ಹೊರ ಬರುವ ಭಯಕ್ಕೆ ಪ್ರತಿಭಟನೆ’

05:45 AM Aug 19, 2017 | Team Udayavani |

ಬೆಂಗಳೂರು: “ಬಿಜೆಪಿಯವರು ತಮ್ಮ ಆಡಳಿತಾವಧಿಯಲ್ಲಿ ಮಾಡಿರುವ ಹಗರಣಗಳು ಹೊರ ಬರುವ ಆತಂಕದಿಂದ ಪಾರಾಗಲು ಪ್ರತಿಭಟನೆ ನಡೆಸಿದ್ದಾರೆ’ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ದಿನೇಶ್‌ ಗುಂಡೂರಾವ್‌ ಹೇಳಿದ್ದಾರೆ.

Advertisement

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, “ದೇಶದಲ್ಲಿಯೇ ಅತಿ ಹೆಚ್ಚು ಭ್ರಷ್ಟಾಚಾರ ಮಾಡಿ ಜೈಲಿಗೆ ಹೋಗಿ ಬಂದ ಬಿಜೆಪಿಯ ಪ್ರಥಮ ಮುಖ್ಯಮಂತ್ರಿ ಯಡಿಯೂರಪ್ಪ ಭ್ರಷ್ಟಾಚಾರದ ವಿರುದ್ಧ ಪ್ರತಿಭಟನೆ ನಡೆಸುತ್ತಿರುವುದು ಹಾಸ್ಯಾಸ್ಪದ  ಎಂದು ವ್ಯಂಗ್ಯವಾಡಿದ್ದಾರೆ.

“ಯಡಿಯೂರಪ್ಪ, ಈಶ್ವರಪ್ಪ, ಆರ್‌. ಅಶೋಕ್‌, ಶೋಭಾ ಕರಂದ್ಲಾಜೆ, ಸಿ.ಟಿ. ರವಿ ತಮ್ಮ ಆಡಳಿತಾವಧಿಯಲ್ಲಿ ಮಾಡಿರುವ ಹಗರಣಗಳು ಹೊರ ಬರುವ ಆತಂಕದಿಂದ ಅವುಗಳನ್ನು ಮರೆ ಮಾಚಲು ಪ್ರತಿಭಟನೆಯ ಹಾದಿ ಹಿಡಿದಿದ್ದಾರೆ. ಯಡಿಯೂರಪ್ಪ 
ವಿರುದ್ಧ ಎಸಿಬಿಯಲ್ಲಿ ಖಾಸಗಿ ವ್ಯಕ್ತಿ ನೀಡಿರುವ ದೂರಿನ ಹಿನ್ನೆಲೆಯಲ್ಲಿ ಪ್ರಕರಣ ದಾಖಲಿಸಿಕೊಂಡು ವಸ್ತುಸ್ಥಿತಿ ಪರಿಗಣಿಸಿ ತನಿಖೆ ನಡೆಸುತ್ತಿದೆ. ಅವರು ತಪ್ಪು ಮಾಡಿಲ್ಲ ಎಂದ ಮೇಲೆ ಭಯ ಏಕೆ’ ಎಂದು ಪ್ರಶ್ನಿಸಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next