Advertisement
ಕಳೆದ ನಾಲ್ಕು ವರ್ಷಗಳಿಂದ ಚಂದ್ರಸಿಂಗ್ ಅವರು ಬೀದರ್ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ ಪಕ್ಷ ಕಟ್ಟಿ ಬೆಳೆಸುತ್ತಿದ್ದಾರೆ. ಗ್ರಾಪಂ, ತಾಪಂ, ಜಿಪಂ ಚುನಾವಣೆಗಳಲ್ಲಿ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ. ಕ್ಷೇತ್ರದ ಜನತೆಯ ಸಮಸ್ಯೆಗೆ ಸ್ಪಂದಿಸಿದ್ದಾರೆ. ಆದರೆ, ಹಾಲಿ ಶಾಸಕ ಖೇಣಿ ಸ್ಥಳೀಯ ಸಮಸ್ಯೆಗಳನ್ನು ಈಡೇರಿಸಲಾಗದೆ ಇದೀಗ ಕಾಂಗ್ರೆಸ್ ಪಕ್ಷಸೇರ್ಪಡೆಗೊಂಡಿರುವುದು ಖಂಡನೀಯ ಎಂದು ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು.
ಆಗ್ರಹಿಸಿ ಘೋಷಣೆ ಕೂಗುತ್ತಿದ್ದರು. ಇದೇ ವೇಳೆ ಬೆಂಬಲಿಗನೊಬ್ಬ ಚಂದ್ರಸಿಂಗ್ ಅವರಿಗೆ ಟಿಕೆಟ್ ನೀಡಬೇಕು ಇಲ್ಲದಿದ್ದರೆ ಮೈಮೇಲೆ ಎಣ್ಣೆ ಸುರಿದುಕೊಂಡು ಆತ್ಯಹತ್ಯೆಗೆ ಯತ್ನಿಸಿದನು. ಸ್ಥಳದಲ್ಲಿದ್ದ ಪ್ರತಿಭಟನಾಕಾರರು ಅವರನ್ನು ಸಮಾಧಾನ ಪಡಿಸಿ ಕರೆ ತಂದರು. ಮತ್ತೂಬ್ಬ ಬೆಂಬಲಿಗ ಏಕಾಏಕಿ ರಸ್ತೆ ಮಧ್ಯಕ್ಕೆ ವಾಹನ ಎದುರಿಗೆ ಮಲಗಿ ಸಂಚಾರಕ್ಕೆ ತೊಡಕು ಉಂಟು ಮಾಡಿದ ಘಟನೆಯೂ ನಡೆಯಿತು. ಇದೇ ಸಂದರ್ಭದಲ್ಲಿ ಕೆಲ ಕಾರ್ಯಕರ್ತರು ಅಶೋಕ ಖೇಣಿ ಭಾವಚಿತ್ರಕ್ಕೆ ಚಪ್ಪಲಿಯಿಂದ ತುಳಿದು, ಹೊಡೆದು ಆಕ್ರೋಶ ವ್ಯಕ್ತಪಡಿಸಿದರು.