Advertisement

ಇಂಧನ ದರ ಏರಿಕೆ ಖಂಡಿಸಿ ಪ್ರತಿಭಟನೆ

03:50 PM Jun 21, 2020 | Suhan S |

ಬೆಳಗಾವಿ: ದೇಶದಲ್ಲಿ ಇಂಧನ ದರ ಏರಿಕೆ ಖಂಡಿಸಿ ಕಮ್ಯೂನಿಸ್ಟ್‌ ಪಕ್ಷ ಹಾಗೂ ಎಐಟಿಯುಸಿ ಕಾರ್ಯಕರ್ತರು ಶನಿವಾರ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

Advertisement

ಇಂಧನ ದರ ಏರಿಕೆ ಮಾಡುವ ಮೂಲಕ ಕೇಂದ್ರ ಸರ್ಕಾರ ಸಾರ್ವಜನಿಕರ ಜೇಬಿಗೆ ಕತ್ತರಿ ಹಾಕುತ್ತಿದೆ. ಪೆಟ್ರೋಲ್‌ ಹಾಗೂ ಡಿಸೇಲ್‌ ದರ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಇಳಿಕೆ ಆಗಿದೆ. ಆದರೆ ಸರ್ಕಾರ ಭಾರತದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ದರ ಹೆಚ್ಚಿಸುತ್ತಿರುವುದರಿಂದ ಜನರಿಗೆ ತೊಂದರೆ ಕೊಡುತ್ತಿದೆ ಎಂದು ದೂರಿದರು.

ಈಗಾಗಲೇ ಲಾಕ್‌ಡೌನ್‌ದಿಂದ ಜನರು ಬದುಕು ನಡೆಸುವುದು ಕಷ್ಟಕರವಾಗಿದೆ. ಇಂಥದರಲ್ಲಿ ಪೆಟ್ರೋಲ್‌, ಡಿಸೇಲ್‌ ದರ ಏರಿಕೆ ಮಾಡಿರುವುದು ಸರಿಯಲ್ಲ. ಕಳೆದ 10-12 ದಿನಗಳ ಅವ ಯಲ್ಲಿ ಇಂಧನ ದರ ಸುಮಾರು 7 ರೂ.ವರೆಗೆ ಹೆಚ್ಚಿಗೆ ಆಗಿದೆ. ಸರ್ಕಾರ ಈ ದರ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದರು.

ಕೋವಿಡ್ ವಿರುದ್ಧ ಹೋರಾಟ ನಡೆಸುತ್ತಿರುವ ಆಶಾ ಕಾರ್ಯಕರ್ತೆಯರಿಗೆ ಸರ್ಕಾರ 3 ಸಾವಿರ ರೂ. ಪರಿಹಾರ ಧನ ಘೋಷಿಸಿದೆ. ಕೋವಿಡ್ ವಿರುದ್ಧ ಅಂಗನವಾಡಿ ಕಾರ್ಯಕರ್ತೆಯರೂ ಹೆಗಲಿಗೆ ಹೆಗಲು ಕೊಟ್ಟು ಕೋವಿಡ್ ವಾರಿಯರ್ಸ್ ಗಳಾಗಿ ಕೆಲಸ ಮಾಡುತ್ತಿದ್ದಾರೆ. ಹೀಗಾಗಿ ಆಶಾ ಹಾಗೂ ಅಂಗನವಾಡಿ ಕಾರ್ಯಕರ್ತೆಯರಿಗೆ 5 ಸಾವಿರ ರೂ. ಪರಿಹಾರ ಘೋಷಿಸಬೇಕು ಎಂದು ಒತ್ತಾಯಿಸಿದರು. ಜಿಲ್ಲಾ ಕಾರ್ಯದರ್ಶಿ ನಾಗೇಶಿ ಸಾತೇರಿ, ಅನಿಲ ಅಜಗಾಂವಕರ, ಯಲ್ಲುಬಾಯಿ ಶೀಗಿಹಳ್ಳಿ ಸೇರಿದಂತೆ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next