Advertisement

ಸಚಿವ ಸುಧಾಕರ್ ವಿರುದ್ಧ ಸಿಡಿದೇಳಿದ ದಲಿತ ಸಂಘಟನೆ : ಚಿಕ್ಕಬಳ್ಳಾಪುರದಲ್ಲಿ ಬೃಹತ್ ಪ್ರತಿಭಟನೆ

08:54 PM Mar 10, 2022 | Team Udayavani |

ಚಿಕ್ಕಬಳ್ಳಾಪುರ : ಬೌಧ್ಧ ಧರ್ಮದ ಅವಹೇಳನೆ ಮಾಡಿ ನೀಡಿದರೆನ್ನಲಾದ ಹೇಳಿಕೆಯನ್ನು ಖಂಡಿಸಿ ಸಚಿವ ಡಾ.ಕೆ.ಸುಧಾಕರ್ ಅವರು ರಾಜಿನಾಮೆ ನೀಡಬೇಕೆಂದು ಆಗ್ರಹಿಸಿ ನಗರದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಬೃಹತ್ ಪ್ರತಿಭಟನೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದರು.

Advertisement

ನಗರದಲ್ಲಿ ಡಾ.ಬಿ.ಆರ್.ಅಂಬೇಡ್ಕರ್ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಭಗವಾನ್ ಬುದ್ದ ಅವರ ವಿಗ್ರಹದೊಂದಿಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ದಲಿತ ಸಂಘಟನೆಗಳ ಒಕ್ಕೂಟದ ಸದಸ್ಯರು ಬೌಧ್ದಧರ್ಮದ ಕುರಿತು ಅವಹೇಳನೆ ಮಾಡಿರುವ ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಕೂಡಲೇ ರಾಜಿನಾಮೆ ನೀಡಬೇಕೆಂದು ಒತ್ತಾಯಿಸಿದರು.
ಬುದ್ಧ ಧರ್ಮ ಜಗತ್ತಿನ ಶ್ರೇಷ್ಠ ಧರ್ಮ ಆಗಿದೆ ಮನುಷ್ಯರೆಲ್ಲರೂ ಸಮಾನರು ಎಂದು ಹೇಳುವ ಜಗತ್ತಿನ ಏಕೈಕ ಧರ್ಮ ಬೌದ್ಧ ಧರ್ಮ ದೇಶದ ಶೋಷಿತ ಸಮುದಾಯದ ಎಲ್ಲರೂ ಬುದ್ಧನ ಅನುಯಾಯಿಗಳಾಗಿದ್ದಾರೆ ಆದರೆ ಆರೋಗ್ಯ ಸಚಿವ ಡಾ ಕೆ ಸುಧಾಕರ್ ಅವರು ಚಿಕ್ಕಬಳ್ಳಾಪುರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಬೌದ್ಧ ಧರ್ಮದ ಸುಳಿಗೆ ಸಿಕ್ಕ ವಿಶ್ವದ ನಾನಾ ದೇಶಗಳು ಆ ಧರ್ಮಕ್ಕೆ ಮತಾಂತರ ಆಗುತ್ತಿರುವಾಗ ಅದನ್ನು ತಡೆದು ಭಾರತೀಯ ಧರ್ಮವನ್ನು ಉಳಿಸಿದ ಕೀರ್ತಿ ಬ್ರಾಹ್ಮಣ ಸಮುದಾಯದ ಆದಿಶಂಕರಾಚಾರ್ಯ ಸಲ್ಲುತ್ತದೆ ಎಂದು ಹೇಳುವ ಮೂಲಕ ಶೋಷಿತ ಸಮುದಾಯದ ಮನಸ್ಸಿಗೆ ನೋವುಂಟು ಮಾಡಿದ್ದಾರೆ ಈ ಮಾತುಗಳನ್ನು ದಲಿತ ಸಂಘಟನೆಗಳ ಒಕ್ಕೂಟ ಖಂಡಿಸುತ್ತದೆ ಎಂದು ಪ್ರತಿಭಟನಾಕಾರರು ಕಿಡಿಕಾರಿದರು.

ನಮ್ಮ ಸಂವಿಧಾನವು ಎಲ್ಲ ಧರ್ಮಗಳನ್ನು ಸಮಾನವಾಗಿ ಕಾಣುತ್ತದೆ ಆದರೆ ಸಚಿವ ಸುಧಾಕರ್ ಅವರು ಜನಪ್ರತಿನಿಧಿಗಳಾಗಿ ಆಯ್ಕೆಯಾಗಿದ್ದರು ಒಂದು ಧರ್ಮವನ್ನು ಹೊಗಳುತ್ತಾ ಇನ್ನೊಂದು ಧರ್ಮವನ್ನು ನಿಂದಿಸುವುದು ಸಂವಿಧಾನಕ್ಕೆ ತಂದ ಅಪಚಾರವಾಗಿದೆ ದಮನಿತ ಸಮುದಾಯದ ವೇದಿಕೆಗಳಲ್ಲಿ ಬುದ್ಧ, ಬಸವ, ಅಂಬೇಡ್ಕರ್ ಅವರನ್ನು ಹೊಗಳುವ ಮೂಲಕ ಸಚಿವ ಡಾ.ಕೆ.ಸುಧಾಕರ್ ಓಟಿನ ರಾಜಕಾರಣವನ್ನು ಮಾಡುತ್ತಿದ್ದಾರೆ ಸಚಿವರು ಹೊರಗಡೆ ಬುದ್ಧಿವಾದವನ್ನು ಪೂಜಿಸುತ್ತಾ ಒಳಗಡೆ ಮನವನ್ನು ಇಟ್ಟುಕೊಂಡಿದ್ದಾರೆ ಎಂದು ಅಸಮಾಧಾನ ವ್ಯಕ್ತಪಡಿಸಿ ಸಚಿವ ಡಾ.ಕೆ.ಸುಧಾಕರ್ ಬೇಷರತ್ ಕ್ಷೆಮೆಯಾಚಿಸಬೇಕು ಇಲ್ಲದಿದ್ದ ಪಕ್ಷದಲ್ಲಿ ರಾಜ್ಯಾದ್ಯಂತ ಅವರ ವಿರುಧ್ಧ ಹೋರಾಟ ನಡೆಸಲಾಗುವುದೆಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಅರಣ್ಯವಾಸಿಗಳ ಸಭೆಯಲ್ಲಿ ಭಾಗಿಯಾಗದ ಅಧಿಕಾರಿಗಳು : ಪಟ್ಟು ಬಿಡದ ಹೋರಾಟಗಾರರು

ಉಪ ವಿಭಾಗಾಧಿಕಾರಿ ಸಂತೋಷ ಕುಮಾರ್ ಅವರ ಮೂಲಕ ಸಿಎಂ ಬಸವರಾಜ್ ಬೊಮ್ಮಯಿ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಿದರು.

Advertisement

ಪ್ರತಿಭಟನೆಯಲ್ಲಿ ದಲಿತ ಸಂಘಟನೆಗಳ ಒಕ್ಕೂಟ ರಾಜ್ಯಾಧ್ಯಕ್ಷ ಡಾ.ಎಂ.ವೆAಕಟಸ್ವಾಮಿ, ತುಮಕೂರಿನ ತಿಪ್ಪೆರುದ್ರಸ್ವಾಮಿಜೀ, ನಾಗಸೇನೆ ಬುದ್ದವಿವಾಹರದ ಬುದ್ದಮ್ಮ, ತಮ್ಮಚಾರಿ ಡಾ.ಹೆಚ್.ಆರ್.ಸುರೇಂದ್ರ, ದಲಿತ ಸಂಘರ್ಷ ಸಮಿತಿಯ ಮುಖಂಡ ಗಡ್ಡಂ ವೆಂಕಟೇಶ್, ಜಿಪಂ ಮಾಜಿ ಸದಸ್ಯ ಕೆ.ಸಿ. ರಾಜಕಾಂತ್, ಬುದ್ದಿಸ್ಟ್ ಸೊಸೈಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷ ಮಲ್ಲಿಕಾರ್ಜುನ್ ಬಾಲ್ಕೆ, ಸಮತಾ ಸೈನಿಕದಳದ ಜಿಲ್ಲಾಧ್ಯಕ್ಷ ವೆಂಕಟರವಣಪ್ಪ, ಕದಸಂಸ ಜಿಲ್ಲಾ ಸಂಚಾಲಕ ಮೇಲೂರು ಮಂಜುನಾಥ್, ಶಿಡ್ಲಘಟ್ಟ ನಾಗನರಸಿಂಹ ಮತ್ತಿತರರು ಭಾಗವಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next