Advertisement
ಪಟ್ಟಣದ ಎಲ್ಲ ವಾರ್ಡ್ಗಳಿಗೆ ಹಗಲೊತ್ತಿನಲ್ಲಿ ನೀರು ಪೂರೈಸಲಾಗುತ್ತಿದೆ. ಆದರೆ ಹೂಗಾರ್ ಪ್ಲಾಟ್ಗೆ(ಲಿಂಬಿತೋಟ) ಮಾತ್ರ ರಾತ್ರಿ ವೇಳೆಯಲ್ಲಿ ನೀರು ಬಿಡಲಾಗುತ್ತಿದೆ. ಇದರಿಂದ ನಮ್ಮ ನಿದ್ದೆಗೆ ತೊಂದರೆಯಾಗುತ್ತಿದೆ. ನೀರಿನ ಟ್ಯಾಂಕ್ನಿಂದ ರಾತ್ರಿ ವೇಳೆಯಲ್ಲಿ ನೀರು ಬಿಡಬೇಡಿ ಎಂದು ಹೇಳೕದಾಗ ವಿದ್ಯುತ್ ಸಂಪರ್ಕ ಕಡಿತಗೊಳಿಸಿ ಪುರಸಭೆ ಸಿಬ್ಬಂದಿ ಕಲ್ಲೆಸೆದಿದ್ದಾರೆ. ಇದರಿಂದ ರಾಜಶ್ರೀ ಮಾಳಗೆ ಎಂಬ ಮಹಿಳೆ ತಲೆ ಒಡೆದಿದ್ದು, ಸೊಲ್ಲಾಪುರ ಖಾಸಗಿ ಆಸ್ಪತ್ರೆಗೆ ದಾಖಲಿಸಲಾದ ಹಿನ್ನೆಲೆಯಲ್ಲಿ ರೊಚ್ಚಿಗೆದ್ದ ಮಹಿಳೆಯರು ಪುರಸಭೆಗೆ ಮುತ್ತಿಗೆ ಹಾಕಿದರು. ಅಲ್ಲದೇ ಪ್ರತಿಭಟನೆ ನಡೆಸಿ ಪುರಸಭೆ ಕಚೇರಿಗೆ ಬೀಗ ಹಾಕಿ ಮುಖ್ಯಾಧಿಕಾರಿ ಖೈಸರ್ ಹುಸೇನ್ ಅವರಿಗೆ ತರಾಟೆಗೆ ತೆಗೆದುಕೊಂಡರು.
Advertisement
ಪುರಸಭೆ ಮುಖ್ಯಾಧಿಕಾರಿಗೆ ಘೇರಾವ್
02:27 PM May 28, 2019 | Team Udayavani |
Advertisement
Udayavani is now on Telegram. Click here to join our channel and stay updated with the latest news.