Advertisement

ಆನ್‌ಲೈನ್‌ ಪರೀಕ್ಷೆ ವಿರೋಧಿಸಿ ಪ್ರತಿಭಟನೆ

01:00 PM Feb 01, 2020 | Suhan S |

ಗದಗ: ಆನ್‌ಲೈನ್‌ ಪರೀಕ್ಷೆ ರದ್ದುಪಡಿಸುವಂತೆ ಆಗ್ರಹಿಸಿ ನಗರದಲ್ಲಿ ಅಖೀಲ ಭಾರತೀಯ ವಿದ್ಯಾರ್ಥಿಪರಿಷತ್‌ ನೇತೃತ್ವದಲ್ಲಿ ನೂರಾರು ಐಟಿಐ ವಿದ್ಯಾರ್ಥಿಗಳು ಶುಕ್ರವಾರ ಪ್ರತಿಭಟನೆ ನಡೆಸಿದರು.

Advertisement

ಕಂಪ್ಯೂಟರ್‌ ಜ್ಞಾನವಿಲ್ಲದ ಬಡ, ರೈತರ, ಕೂಲಿ ಕಾರ್ಮಿಕರ ಹಾಗೂ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳೇ ಹೆಚ್ಚಿನ ಸಂಖ್ಯೆಯಲ್ಲಿ ಐಟಿಐ ಆಯ್ದುಕೊಳ್ಳುತ್ತಾರೆ. ಆದರೆ, ಕೈಗಾರಿಕಾ ತರಬೇತಿ ಸಂಸ್ಥೆಯ ವಿದ್ಯಾರ್ಥಿಗಳ ಪರೀಕ್ಷಾ ಪದ್ಧತಿಯನ್ನು ಆನ್‌ಲೈನ್‌ ಪರೀಕ್ಷೆಯಾಗಿ ಪರಿವರ್ತಿಸಲಾಗಿದೆ. ಯಾವುದೇ ಇಂಜಿನಿಯರಿಂಗ್‌ ಹಾಗೂ ಡಿಪ್ಲೊಮಾ ವಿದ್ಯಾರ್ಥಿಗಳಿಗೂ ಇಲ್ಲದ ನಿಯಮಗಳನ್ನು ಐಟಿಐ ವಿದ್ಯಾರ್ಥಿಗಳ ಮೇಲೆ ಹೇರಲಾಗುತ್ತಿದೆ. ಕೈಗಾರಿಕಾ ತರಬೇತಿ ವಿದ್ಯಾರ್ಥಿಗಳಿಗೆ ಮಾತ್ರ ಆನ್‌ ಲೈನ್‌ ಪರೀಕ್ಷಾ ಪದ್ಧತಿ ಮಾಡಿರುವುದು ಅವೈಜ್ಞಾನಿಕ ಎಂದು ದೂರಿದರು.

ಜೊತೆಗೆ ಪರೀಕ್ಞಾ ಶುಲ್ಕ ಹೆಚ್ಚಿಸಿರುವುದು ಮತ್ತು ಅದಕ್ಕೆ ಜಿಎಸ್‌ಟಿ ವಿಧಿಸಿರುವುದು ಗಾಯದ ಮೇಲೆ ಬರೆ ಹಾಕಿದಂತಾಗಿದೆ. ಈ ಹಿನ್ನೆಲೆಯಲ್ಲಿ ತಕ್ಷಣವೇ ಸರಕಾರ ಆನ್‌ಲೈನ್‌ ಪರೀಕ್ಷೆಯನ್ನು ಕೈ ಬಿಡಬೇಕು. ಪರೀಕ್ಷಾ ಶುಲ್ಕದಲ್ಲಿ ವಿನಾಯಿತಿ ನೀಡಬೇಕು. ಎಲ್ಲ ಐಟಿಐ ವಿದ್ಯಾರ್ಥಿಗಳಿಗೆ ಲ್ಯಾಪ್‌ ಟಾಪ್‌ ವಿತರಣೆ ಮಾಡಬೇಕು ಎಂದು ಪ್ರತಿಭಟನಾ ನಿರತ ವಿದ್ಯಾರ್ಥಿಗಳು ಆಗ್ರಹಿಸಿದರು.

ರವಿ ಮಾನ್ವಿ, ಮಹೇಶ ಲಮಾಣಿ,ಬಸವರಾಜ ಕಾಬಿ, ಸಚಿನ ಮಡಿವಾಳರ, ಮಹಾಂತೇಶ ಮಣಕವಾಡ, ವಿದ್ಯಾರ್ಥಿಗಳು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next