Advertisement

ರಾಯಚೂರು ನ್ಯಾಯಾಧೀಶರ ವಿರುದ್ಧ ಗದಗದಲ್ಲಿ ಪ್ರತಿಭಟನೆ

09:46 AM Feb 04, 2022 | Team Udayavani |

ಗದಗ: ರಾಯಚೂರು ಡಿಜೆ ಮಲ್ಲಿಕಾರ್ಜುನ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆಗ್ರಹಿಸಿ ಇಂದು ಗದಗ ನಗರದಲ್ಲಿ ಜಯಕರ್ನಾಟಕ ಸಂಘಟನೆ ಪ್ರತಿಭಟನೆ ಹಮ್ಮಿಕೊಂಡಿದೆ.

Advertisement

ಗದಗ ಬಂದ್ ಗೆ ಕರೆ ನೀಡಿರುವ ಸಂಘಟನೆ ಕಾರ್ಯಕರ್ತರು‌ ಈಗಾಗಲೇ ನಗರದ ಮುಳಗುಂದ ನಾಕಾದಲ್ಲಿ ರಸ್ತೆ ತಡೆದು ಪ್ರತಿಭಟನೆ ನಡೆಸಿದ್ದಾರೆ. ರಾಯಚೂರು ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡ ಅವರು ಡಾ. ಬಿ.ಆರ್ ಅಂಬೇಡ್ಕರ್ ಅವರಿಗೆ ಅಪಮಾನ ಮಾಡಿದ ಆರೋಪ ಹಿನ್ನೆಲೆ ಪ್ರತಿಭಟನೆ ನಡೆಯುತ್ತಿದ್ದು ರಟ್ಟಿನ ಬಾಕ್ಸ್ ಗೆ ಬೆಂಕಿ ಹಚ್ಚಿವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.

ಇದನ್ನೂ ಓದಿ: ಲಿಂಗಾನುಪಾತದಲ್ಲಿ ವ್ಯತ್ಯಾಸ: ಉಡುಪಿ ಜಿಲ್ಲೆಯಲ್ಲಿ ಸಾವಿರ ಪುರುಷರಿಗೆ 935 ಸ್ತ್ರೀಯರು!

ಇದೇ ವೇಳೆ ಬಸ್ ತಡೆಯಲು ಮುಂದಾದ ಪ್ರತಿಭಟನಾಕಾರರು ಹಾಗೂ ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ನ್ಯಾಯಾಧೀಶರಾದ ಮಲ್ಲಿಕಾರ್ಜುನಗೌಡರ ಅವರ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.

Advertisement

Udayavani is now on Telegram. Click here to join our channel and stay updated with the latest news.

Next