Advertisement

ಸಿದ್ದರಾಮಯ್ಯ ವಿರುದ್ದ ಪ್ರತಿಭಟನೆ

12:10 PM Nov 16, 2021 | Team Udayavani |

ಆಳಂದ: ದಲಿತರು ಹೊಟ್ಟೆ ಪಾಡಿಗಾಗಿ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ ಎಂಬ ಮಾಜಿ ಸಿಎಂ ಸಿದ್ದರಾಮಯ್ಯನವರು ಹೇಳಿಕೆ ನೀಡಿದ್ದು, ಕೂಡಲೇ ಹೇಳಿಕೆ ವಾಪಸ್‌ ಪಡೆದು ಕ್ಷಮೆ ಯಾಚಿಸಲು ಒತ್ತಾಯಿಸಿ ತಾಲೂಕು ಬಿಜೆಪಿ ಎಸ್‌ಸಿ ಮೋರ್ಚಾ ಆಶ್ರಯದಲ್ಲಿ ಪಟ್ಟಣದ ಬಸ್‌ ನಿಲ್ದಾಣ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.

Advertisement

ಬಸ್‌ ನಿಲ್ದಾಣ ಬಳಿ ಜಮಾಯಿಸಿದ್ದ ಕಾರ್ಯಕರ್ತರು ಮತ್ತು ಮುಖಂಡರು, ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಘೋಷಣೆ ಕೂಗಿದರು. ದಲಿತರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಇದೇ ವೇಳೆ ಜಿಲ್ಲಾ ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ಸುನೀಲ ಹಿರೋಳಿಕರ ಮಾತನಾಡಿದರು. ಮಂಡಲ ಅಧ್ಯಕ್ಷ ಆನಂದ ಬಿರಾದಾರ ಕೊರಳ್ಳಿ, ಜಿಲ್ಲಾ ಎಸ್‌ಸಿ ಮೋರ್ಚಾ ಉಪಾಧ್ಯಕ್ಷ ಅಂಬಾರಾಯ ಚಲಗೇರಾ, ರಾಜು ನಿಂಬರ್ಗಾ ಮಾತನಾಡಿದರು. ಸಂತೋಷ ಹಾದಿಮನಿ, ಆನಂದ ಗಾಯಕವಾಡ, ಮಲ್ಲಿಕಾರ್ಜುನ ಕಂದಗೂಳೆ ರಾಜುಗೋಳ, ಶರಣಬಸಪ್ಪ ಕಾಳಕಿಂಗೆ, ಗೌತಮ ಕೋಚ್ಚಿ, ಸಂತೋಷ ಪವಾರ, ಪ್ರಕಾಶ ಮಾನೆ, ಶರಣು ಕುಮಸಿ, ಪ್ರಕಾಶ ತೋಳೆ, ಪಪ್ಪು ತೋಳೆ, ಥಾವರು ರಾಠೊಡ, ಧನ್ನು ಕಾರಬಾರಿ, ಥಾವರು ಜಾಧವ, ಮೀಥುನ ರಾಠೊಡ ಹಾಗೂ ಬಿಜೆಪಿ ಕಾರ್ಯಕರ್ತರು ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next