Advertisement

ಹಳೆಯಂಗಡಿ ಗ್ರಾಮ ಪಂಚಾಯತ್ ನ ಆಡಳಿತದ ವಿರುದ್ಧ ಪ್ರತಿಭಟನೆ

01:31 PM Aug 02, 2019 | keerthan |

ಹಳೆಯಂಗಡಿ: ಗ್ರಾಮ ಪಂಚಾಯತ್ ನ ಆಡಳಿತದ ವಿರುದ್ಧ ಸಾರ್ವಜನಿಕರು ಹಾಗೂ ಬಿಜೆಪಿಯ ಸ್ಥಾನೀಯ ಸಮಿತಿಯ ನೇತೃತ್ವದಲ್ಲಿ ಶುಕ್ರವಾರ ಗ್ರಾಮ ಪಂಚಾಯತ್ ಭಾಗದಲ್ಲಿ ಪ್ರತಿಭಟನೆ ನಡೆಯಿತು.

Advertisement

ಗ್ರಾಮ ಪಂಚಾಯತ್ ನ ಆಡಳಿತದಲ್ಲಿ ಗ್ರಾಮ ಸಭೆ ವಾರ್ಡ್ ಸಭೆ ಸಾಮಾನ್ಯ ಸಭೆ ಕಳೆದ 10 ತಿಂಗಳಿಂದ ನಡೆಯುತ್ತಿಲ್ಲ. ಗ್ರಾಮಸ್ಥರಿಗೆ ಯಾವೊಂದು ಸೌಲಭ್ಯ ಸಿಗುತ್ತಿಲ್ಲ. ತ್ಯಾಜ್ಯ ವಿಲೇವಾರಿ ಸರಿಯಾಗಿ ನಡೆಯುತ್ತಿಲ್ಲ. ಗ್ರಾಮಸ್ಥರ ಸಮಸ್ಯೆಗೆ ಸ್ಪಂದಿಸುತ್ತಿಲ್ಲ ಎಂದು ಆರೋಪಿಸಿ ಪ್ರತಿಭಟನೆ ನಡೆದಿದೆ.

ಮಂಗಳೂರು ತಾಲೂಕು ಪಂಚಾಯತ್ ನ ಕಾರ್ಯನಿರ್ವಾಹಣ ಅಧಿಕಾರಿ ಸದಾನಂದ ಅವರು ಸ್ಥಳಕ್ಕೆ ಬಂದು ಪ್ರತಿಭಟನಾಕಾರರ ಮನವಿಯನ್ನು ಸ್ವೀಕರಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾ ಪಂಚಾಯಿತಿ ಸದಸ್ಯ ವಿನೋದ್ ತಾಲೂಕು ಪಂಚಾಯತ್ ಸದಸ್ಯ ಜೀವನ್ ಪ್ರಕಾಶ್, ಹಳೆಯಂಗಡಿ ಗ್ರಾಮ ಪಂಚಾಯತ್ ನ ಬಿಜೆಪಿ ಬೆಂಬಲಿತ ಸದಸ್ಯರು., ನ್ಯಾಯವಾದಿ ಡೇನಿಯಲ್ ಡಿಸೋಜ, ಬಿಜೆಪಿಯ ಈಶ್ವರ್ ಕಟೀಲು, ನರೇಂದ್ರ ಪ್ರಭು, ಮನೋಜ್ ಕುಮಾರ್, ಶೂಗೇಂದ್ರ ಸಸಿಹಿತ್ಲು, ಸತೀಶ್ ಭಟ್, ರಾಮಚಂದ್ರ ಮತ್ತಿತರರು ಭಾಗವಹಿಸಿದ್ದರು


ಪಣಂಬೂರು ಎಸಿಪಿ ಶ್ರೀನಿವಾಸಗೌಡ ಹಾಗೂ ಮುಲ್ಕಿ ಇನ್ಸ್ಪೆಕ್ಟರ್ ಅನಂತಪದ್ಮನಾಭ ಇವರ ನೇತೃತ್ವದಲ್ಲಿ ಪೊಲೀಸ್ ಬಂದೋಬಸ್ತ್ ವ್ಯವಸ್ಥೆ ಮಾಡಲಾಯಿತು.

Advertisement

Advertisement

Udayavani is now on Telegram. Click here to join our channel and stay updated with the latest news.

Next