Advertisement

ತ.ನಾಡಿಗೆ ನೀರು ವಿರೋಧಿಸಿ ಪ್ರತಿಭಟನೆ

03:05 AM Jul 09, 2017 | Team Udayavani |

ಮೈಸೂರು: ತಮಿಳುನಾಡಿಗೆ ನೀರು ಹರಿಸುತ್ತಿರುವ ರಾಜ್ಯ ಸರ್ಕಾರದ ಕ್ರಮ ಖಂಡಿಸಿ ಮೈಸೂರು ಕನ್ನಡ ವೇದಿಕೆ ಪದಾಧಿಕಾರಿಗಳು ಶನಿವಾರ ಪ್ರತಿಭಟನೆ ನಡೆಸಿದರು.

Advertisement

ಕಾವೇರಿ ಅಚ್ಚುಕಟ್ಟು ಪ್ರಾಧಿಕಾರ ಕಚೇರಿ ಎದುರು ಸೇರಿದ ವೇದಿಕೆಯ ಪದಾಧಿಕಾರಿಗಳು, ಮಳೆಯಾಗದೆ ಜಲಾಶಯಗಳು ಖಾಲಿಯಾಗಿವೆ. ಈಗಷ್ಟೇ ಚೇತರಿಸಿಕೊಳ್ಳುತ್ತಿರುವ ಕೆಆರ್‌ಎಸ್‌ ಜಲಾಶಯ ಭರ್ತಿ ಯಾಗುವ ಮುನ್ನವೇ ತ.ನಾಡಿಗೆ ನೀರು ಹರಿಸುತ್ತಿರುವುದು ಖಂಡನೀಯ ಎಂದು ಆಕ್ರೋಶ ವ್ಯಕ್ತಪಡಿಸಿದರು. ಕೆಆರ್‌ಎಸ್‌ ನಿಂದ ತ.ನಾಡಿಗೆ ನೀರು ಹರಿಸುವುದು ನಿಲ್ಲಿಸುವಂತೆ ಆಗ್ರಹಿಸಿ ಕನ್ನಡ ಜನಪರ ವೇದಿಕೆಯ ಕಾರ್ಯಕರ್ತರು ಮದ್ದೂರು ಕೆರೆಯಂಗಳದಲ್ಲಿ ಆರಂಭಿಸಿರುವ ಅಹೋರಾತ್ರಿ ಧರಣಿ ಎರಡನೇ ದಿನಕ್ಕೆ ಕಾಲಿಟ್ಟಿದೆ.

Advertisement

Udayavani is now on Telegram. Click here to join our channel and stay updated with the latest news.

Next