Advertisement

ಕರ್ನಾಟಕ ಬಂದ್ ಗೆ ಕರೆ ನೀಡಿದವರ ಆಸ್ತಿ ಜಪ್ತಿ ಮಾಡಿ! ಡಿ.5ರ ಬಂದ್ ವಿರೋಧಿಸಿ ಪ್ರತಿಭಟನೆ

03:59 PM Dec 01, 2020 | sudhir |

ವಿಜಯಪುರ : ರಾಜ್ಯ ಸರ್ಕಾರ ಮರಾಠಾ ಅಭಿವೃದ್ದಿ ನಿಗಮ ರಚನೆ ವಿರೋಧಿಸಿ ಕನ್ನಡ ಪರ ಸಂಘಟನೆಗಳು ಡಿ.5 ರಂದು ಕರೆ ನೀಡಿರುವ ಕರ್ನಾಟಕ ಬಂದನ್ನು ವಿರೋಧಿಸಿ ಮಂಗಳವಾರ ನಗರದಲ್ಲಿ ವಿವಿಧ ಸಂಘಟನೆಗಳ ನೇತೃತ್ವದಲ್ಲಿ ಪ್ರತಿಭಟನೆ ನಡೆಯಿತು.

Advertisement

ಕರ್ನಾಟಕ ಮಾಧ್ಯಮ ಪರಿಷತ್ ಮತ್ತು ಜೀಸ್ನಾ ಶಿಕ್ಷಣ ಮತ್ತು ಸಮಾಜ ಕಲ್ಯಾಣ ಸಂಸ್ಥೆ ಹಾಗೂ ಸುದರ್ಶನ ಸಮೀತಿ ನೇತೃತ್ವದಲ್ಲಿ ನೂರಾರು‌ ಕಾರ್ಯಕರ್ತರು ನಗರದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು. ನಂತರ ಡಾ.ಅಂಬೇಡ್ಕರ್ ವೃತ್ತದಿಂದ ಜಿಲ್ಲಾಧಿಕಾರಿ ಕಚೇರಿ ವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ, ಕರ್ನಾಟಕ ಬಂದ್ ನಡೆಸುವವರ ಆಸ್ತಿ ಜಪ್ತಿ ಮಾಡುವಂತೆ ಆಗ್ರಹಿಸಿದರು.

ಪಾಲಿಕೆ ಮಾಜಿ ಸದಸ್ಯ ರಾಹುಲ್ ಜಾಧವ್, ದಲಿತ ಪರ ಸಂಘಟನೆಯ ಅಡಿವೆಪ್ಪ ಸಾಲಗಲ್ ಇತರರು ಪ್ರತಿಭಟನೆಯ ನೇತೃತ್ವ ವಹಿಸಿದ್ದರು.

ಇದನ್ನೂ ಓದಿ:ಭಜನಾ ಪದಗಳ ಮೋಡಿಗಾರ್ತಿ ಹಳ್ಳೂರಿನ ರುಕ್ಮಿಣಿ

ನಂತರ ಜಿಲ್ಲಾಧಿಕಾರಿ ಸುನಿಲ್ ಕುಮಾರ ಅವರ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next