Advertisement

ಸರ್ಕಾರದ ಶವ ಯಾತ್ರೆಗೆ ಮುಂದಾದ ರೈತರು ವಶಕ್ಕೆ

10:32 PM Nov 26, 2022 | Team Udayavani |

ಬೆಂಗಳೂರು: ಕಬ್ಬಿನ ದರ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕಬ್ಬು ಬೆಳೆಗಾರರು ಫ್ರೀಡಂ ಪಾರ್ಕ್‌ನಲ್ಲಿ ನಡೆಸುತ್ತಿರುವ ಧರಣಿ ಭಾನುವಾರ 6ನೇ ದಿನಕ್ಕೆ ಕಾಲಿರಿಸಿದ್ದು , ಸರ್ಕಾರದ ಶವಯಾತ್ರೆ ಮಾಡಲು ಮುಂದಾದ ರೈತರನ್ನು ಶನಿವಾರ ಪೊಲೀಸರು ವಶಕ್ಕೆ ಪಡೆದರು.

Advertisement

ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರಬೂರು ಶಾಂತಕುಮಾರ್‌ ನೇತೃತ್ವದಲ್ಲಿ ನಡೆಯುತ್ತಿರುವ ಪ್ರತಿಭಟನೆಯಲ್ಲಿ ರಾಜ್ಯದ ವಿವಿ ಧ ಮೂಲೆಗಳಿಂದ ರೈತರು ಭಾಗವಹಿಸಿದ್ದಾರೆ. ಭಾನುವಾರ ಸರ್ಕಾರದ ವಿರುದ್ಧ ಕಪ್ಪುಬಾವುಟ ಪ್ರದರ್ಶನ ಮಾಡಲಾಗುವುದು ಎಂದು ರೈತರು ಎಚ್ಚರಿಸಿದ್ದಾರೆ.

ಈ ಸಂದರ್ಭದಲ್ಲಿ ಮಾತನಾಡಿದ ಕಬ್ಬು ಬೆಳೆಗಾರರ ಸಂಘದ ರಾಜ್ಯಾಧ್ಯಕ್ಷ ಕುರುಬೂರು ಶಾಂತಕುಮಾರ್‌, ಹಲವು ದಿನಗಳಿಂದ ರೈತರ ಹೋರಾಟ ನಡೆಸುತ್ತಿದ್ದು ಸರ್ಕಾರ ಈ ಬಗ್ಗೆ ಗಮನ ಹರಿಸುತ್ತಿಲ್ಲ. ಬೇಡಿಕೆ ಈಡೇರಿಕೆ ವರೆಗೂ ನಮ್ಮ ಹೋರಾಟ ಹೀಗೆ ಮುಂದುವರಿಯಲಿದೆ ಎಂದು ಎಚ್ಚರಿಕೆ ನೀಡಿದರು.

Advertisement

Udayavani is now on Telegram. Click here to join our channel and stay updated with the latest news.

Next