Advertisement

ರಮೇಶ ಜಾರಕಿಹೊಳಿ‌ಗೆ ಮತ್ತೆ ಸಚಿವ ಸ್ಥಾನ ನೀಡುವಂತೆ ಒಂಟೆ ಸವಾರಿ ಪ್ರತಿಭಟನೆ

02:19 PM Jun 17, 2021 | Team Udayavani |

ಬೆಳಗಾವಿ: ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡಬೇಕು ಎಂದು ಆಗ್ರಹಿಸಿ ಅವರ ಅಭಿಮಾನಿಗಳು ಹಾಗೂ ಹಿತೈಷಿಗಳು ನಗರದ ಚನ್ನಮ್ಮ ವೃತ್ತದಲ್ಲಿ ಒಂಟೆಗಳ ಮೇಲೆ ಸವಾರಿ ನಡೆಸುವ ಮೂಲಕ ವಿನೂತನವಾಗಿ ಪ್ರತಿಭಟನೆ ನಡೆಸಿದರು.

Advertisement

ರಮೇಶ ಅಭಿಮಾನಿಗಳು ಹತ್ತು ಒಂಟೆಗಳ ಮೇಲೆ ಕುಳಿತುಕೊಂಡು ವಿನೂತನವಾಗಿ ಪ್ರತಿಭಟನೆ ನಡೆಸಿ ಗಮನ ಸೆಳೆದರು. ಚನ್ನಮ್ಮ ವೃತ್ತದಲ್ಲಿ ಸುತ್ತು ಹಾಕಿದ ರಮೇಶ ಅವರ ಅಭಿಮಾನಿಗಳು ಶಿಸ್ತುಬದ್ಧ ಮೆರವಣಿಗೆ ನಡೆಸುತ್ತ ಸವಾರಿ ನಡೆಸಿದರು.

ದಲಿತ ಕ್ರಾಂತಿ ಸಂಘಟಹಾಗೂ ಘಟಪ್ರಭಾ ಅಭಿಮಾನಿಗಳ ಬಳಗದ ವತಿಯಿಂದ ಪ್ರತಿಭಟನೆ ನಡೆಯಿತು.

ಇದನ್ನೂ ಓದಿ:ಈಶ್ವರಪ್ಪ ಓಪನ್ ಹಾರ್ಟ್ ಮನುಷ್ಯ, ವಲಸಿಗರ ಬಗ್ಗೆ ಕೆಟ್ಟದಾಗಿ ಮಾತಾಡಿಲ್ಲ: ರಮೇಶ ಜಾರಕಿಹೊಳಿ

ರಮೇಶ ಜಾರಕಿಹೊಳಿ‌ ಅವರನ್ನು ರಾಜಕೀಯವಾಗಿ ಮುಗಿಸಲು ಷಡ್ಯಂತ್ರ ನಡೆದಿದೆ. ಅವರ ಹೆಸರಿಗೆ ಮಸಿ ಬಳಿಯಲು ಕೆಲವರು ಕುತಂತ್ರ ನಡೆಸಿದ್ದಾರೆ. ರಾಜ್ಯದಲ್ಲಿ ಅಭಿವೃದ್ಧಿ ಕೆಲಸ‌ ಮಾಡುವ ಮೂಲಕ‌ ಜನಮಾನಸದಲ್ಲಿ‌ ಉಳಿದಿರುವ ರಮೇಶ ಜಾರಕಿಹೊಳಿ‌ ಅವರಿಗೆ ಮತ್ತೆ ಸಚಿವ ಸ್ಥಾನ ನೀಡಬೇಕು. ಜಲಸಂಪನ್ಮೂಲ ಸಚಿವರನ್ನಾಗಿಯೇ ಮಾಡಬೇಕು ಎಂದು ಆಗ್ರಹಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next