Advertisement

ಉದಯಪುರದ ಕನ್ನಯ್ಯಲಾಲ್ ಕೊಲೆ ಖಂಡಿಸಿ ಬಳ್ಳಾರಿ ಬಂದ್

10:43 AM Jul 04, 2022 | Team Udayavani |

ಬಳ್ಳಾರಿ: ರಾಜಸ್ಥಾನ ಉದಯಪುರದ ಕನ್ನಯ್ಯಲಾಲ್ ಕೊಲೆಯನ್ನು ಖಂಡಿಸಿ ಬಳ್ಳಾರಿಯಲ್ಲಿ ದೇಶಭಕ್ತ ನಾಗರೀಕರ ವೇದಿಕೆಯಿಂದ ಸೊಮವಾರ ಬಳ್ಳಾರಿ ಬಂದ್ ಆಚರಿಸಿತು.

Advertisement

ಸಾರಿಗೆ ಬಸ್, ಸರ್ಕಾರಿ ಶಾಲಾ ಕಾಲೇಜು, ಬ್ಯಾಂಕ್ ಗಳನ್ನು ಹೊರತುಪಡಿಸಿ ಉಳಿದೆಲ್ಲ ವಾಣಿಜ್ಯ ಮಳಿಗೆ, ಚಿತ್ರಮಂದಿರಗಳು ಬಂದ್ ಆಗಿದ್ದವು. ಬಂದ್ ಹಿನ್ನೆಲೆಯಲ್ಲಿ ನಗರದಾದ್ಯಂತ ಪೊಲೀಸ್ ಬಂದೋಬಸ್ತ್ ಏರ್ಪಡಿಸಿದ್ದರು.

ಇದನ್ನೂ ಓದಿ:ನಾನೆಂದೂ ಮುಖ್ಯಮಂತ್ರಿ ಹುದ್ದೆಯನ್ನು ಕೇಳಿಲ್ಲ: ಮಹಾ ಸಿಎಂ ಏಕನಾಥ ಶಿಂಧೆ

ಪ್ರತಿಭಟನಾಕಾರರು ಬೆಳಗ್ಗೆ 8 ಗಂಟೆಯಿಂದ ಬೈಕ್ ರ್ಯಾಲಿ ಹಮ್ಮಿಕೊಂಡರು. ನಗರದ ಕನಕ ದುರ್ಗಮ್ಮ ದೇವಸ್ಥಾನದಿಂದ ಆರಂಭವಾದ ರ್ಯಾಲಿ, ಕೌಲ್ ಬಜಾರ್ ಸೇರಿ ನಗರದ ಪ್ರಮುಖ ರಸ್ತೆಗಳಲ್ಲಿ ಸಂಚರಿಸಿ ಕೆಲವೊಂದು ಅಂಗಡಿಗಳನ್ನು ಮುಚ್ವಿಸಿದರು. ಬಹುತೇಕ ವಾಣಿಜ್ಯ ಮಳಿಗೆಗಳು ಸ್ವಯಂ ಪ್ರೇರಿತವಾಗಿ ಬಂದ್ ಮಾಡಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next