Advertisement

ದೆಹಲಿ ಜಾಮಾ ಮಸೀದಿ ಎದುರು ಬೃಹತ್ ಪ್ರತಿಭಟನೆ : ಪ್ರವಾದಿ ವಿರುದ್ಧ ಹೇಳಿಕೆಗೆ ಖಂಡನೆ

03:10 PM Jun 10, 2022 | Team Udayavani |

ನವದೆಹಲಿ: ಪ್ರವಾದಿ ಮೊಹಮ್ಮದ್ ಅವರ ಕುರಿತಾಗಿ ಅಮಾನತುಗೊಂಡ ಬಿಜೆಪಿ ವಕ್ತಾರೆ ನೂಪುರ್ ಶರ್ಮಾ ಮತ್ತು ಉಚ್ಛಾಟಿತ ನಾಯಕ ನವೀನ್ ಜಿಂದಾಲ್ ಅವರ ಪ್ರಚೋದನಕಾರಿ ಹೇಳಿಕೆಗಳ ವಿರುದ್ಧ ದೆಹಲಿಯ ಜಾಮಾ ಮಸೀದಿ ಎದುರು ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಲಾಗಿದೆ.

Advertisement

ಪ್ರಾರ್ಥನೆಯ ಬಳಿಕ ಸಾವಿರಾರು ಸಂಖ್ಯೆಯಲ್ಲಿ ಜಮಾಯಿಸಿದ ಮುಸ್ಲಿಮರು ಪ್ರತಿಭಟನೆ ಆರಂಭಿಸಿದ್ದಾರೆ. ಪ್ರವಾದಿ ವಿರುದ್ದದ ಹೇಳಿಕೆಗಳ ವಿರುದ್ಧ ಆಕ್ರೋಶ ಹೊರ ಹಾಕಿದ್ದಾರೆ.

ಇದೆ ವೇಳೆ ಮಸೀದಿಯಿಂದ ಪ್ರತಿಭಟನೆಗೆ ಕರೆ ನೀಡಿಲ್ಲ ಎಂದು ಜಾಮಾ ಮಸೀದಿಯ ಶಾಹಿ ಇಮಾಮ್ ಹೇಳಿದ್ದಾರೆ.ಪ್ರತಿಭಟಿಸುವವರು ಯಾರೆಂದು ನಮಗೆ ತಿಳಿದಿಲ್ಲ, ಅವರು ಎಐಎಂಐಎಂಗೆ ಸೇರಿದವರು ಅಥವಾ ಓವೈಸಿಯವರ ಜನರು ಎಂದು ನಾನು ಭಾವಿಸುತ್ತೇನೆ. ಅವರು ಬಯಸಿದರೆ, ಅವರು ಪ್ರತಿಭಟಿಸಬಹುದು, ಆದರೆ ನಾವು ಅವರನ್ನು ಬೆಂಬಲಿಸುವುದಿಲ್ಲ ಎಂದು ನಾವು ಸ್ಪಷ್ಟಪಡಿಸಿದ್ದೇವೆ ಎಂದಿದ್ದಾರೆ.

ಪ್ರತಿಭಟನಾ ನಿರತರನ್ನು ಸ್ಥಳದಿಂದ ಪೊಲೀಸರು ತೆರವು ಮಾಡಿದ್ದು, ಪರಿಸ್ಥಿತಿ ಶಾಂತಿಯುತವಾಗಿದೆ ಎಂದು ತಿಳಿದು ಬಂದಿದೆ.

Advertisement

Udayavani is now on Telegram. Click here to join our channel and stay updated with the latest news.

Next