Advertisement

ರಬಕವಿ ಬನಹಟ್ಟಿ:ಶಿಕ್ಷಕರ ಮೇಲೆ ಹಲ್ಲೆ ಖಂಡಿಸಿ ಹಿಂದೂಪರ ಸಂಘಟನೆಗಳಿಂದ ಸ್ವಯಂ ಪ್ರೇರಿತ ಬಂದ್

12:52 PM Feb 09, 2022 | Team Udayavani |

ರಬಕವಿ-ಬನಹಟ್ಟಿ: ಶಿಕ್ಷಕರ ಮೇಲಿನ ಹಲ್ಲೆ ಖಂಡಿಸಿ ಬುಧವಾರ ಕರೆ ನೀಡಿರುವ ಬನಹಟ್ಟಿ ಬಂದ್ ಜೋರಾಗಿ ನಡೆಯುತ್ತಿದೆ.

Advertisement

ಬನಹಟ್ಟಿ ಪೊಲೀಸ್ ಠಾಣೆಯಿಂದ ತಹಶೀಲ್ದಾರ ಕಚೇರಿವರೆಗೆ ಮಾತ್ರ ಪ್ರತಿಭಟನೆ ನಡೆಸಲು ಅನುಮತಿಸಿದ್ದರಿಂದ ಬನಹಟ್ಟಿಯ ಪೊಲೀಸ್ ಠಾಣೆ ಎದುರು ಜಮಾವಣೆಗೊಂಡ ಹಿಂದೂಪರ ಸಂಘಟನೆಗಳು ನ್ಯಾಯ ಒದಗಿಸುವಂತೆ ಘೋಷಣೆಗಳನ್ನು ಕೂಗಿದರು.

ಈ ವೇಳೆ ಮೆರವಣಿಗೆಗೆ ಅವಕಾಶ ಕೊಡಬೇಕೆಂದು ಪೊಲೀಸ್ ಠಾಣೆ ಎದುರು ಪೊಲೀಸ್ ಅಧಿಕಾರಿಗಳ ಜೊತೆ ಪ್ರತಿಭಟನಾಕಾರರು ವಾಗ್ವಾದ ನಡೆಸಿದರು.

ಈ ಸಂದರ್ಭದಲ್ಲಿ ಬಾಗಲಕೋಟೆ ಎಸ್. ಪಿ. ಲೋಕೇಶ್ ಜಗಲಾಸರ ಸ್ಥಳಕ್ಕೆ ಆಗಮಿಸಿ ಪ್ರತಿಭಟನಾಕಾರರ ಜೊತೆ ಮಾತುಕತೆ ನಡೆಸಿದರು. ಆದರೂ ಪ್ರತಿಭಟನಾಕಾರರು ಒಪ್ಪಲಿಲ್ಲ.

ನಂತರ ಅಲ್ಲಿಂದ ಬಂದ್ ನ ಪ್ರತಿಭಟನೆಯಲ್ಲಿ ಪಾಲ್ಗೊಂಡ ಸಾವಿರಾರು ಹಿಂದೂ ಪರ ಸಂಘಟನೆಯವರು ತಹಶಿಲ್ದಾರರ ಕಚೇರಿಗೆ ತೆರಳಿ ಈ ಘಟನೆಗೆ ಕಾರಣಿಕರ್ತರಾದವರನ್ನು ಕೂಡಲೇ ಬಂದಿಸಿ ಅಗತ್ಯ ಕ್ರಮತೆಗೆದುಕೊಳ್ಳಬೇಕೆಂದು ಮನವಿ ಸಲ್ಲಿಸಿದರು.

Advertisement

 

Advertisement

Udayavani is now on Telegram. Click here to join our channel and stay updated with the latest news.

Next