Advertisement

ಅಂಗನವಾಡಿ ನೌಕರರಿಂದ ಪ್ರತಿಭಟನೆ

07:09 PM Mar 16, 2021 | Team Udayavani |

ಯಾದಗಿರಿ : ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದಿಂದ ಜಿಲ್ಲೆಯ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.

Advertisement

ಕೊರೊನಾ ಸಂದರ್ಭದಲ್ಲಿ ಸೇವೆ ಪಡೆದು, ಮಹಿಳೆ ಮತ್ತು ಮಕ್ಕಳಿಗೆ ಮನೆ-ಮನೆಗೆ ಪೌಷ್ಟಿಕ ಆಹಾರ ಒದಗಿಸುವುದು ಸೇರಿದಂತೆ ಸರ್ಕಾರದ ಎಲ್ಲ ಯೋಜನೆ ಜನರ ಮನೆ ಬಾಗಿಲಿಗೆ ತಲುಪಿಸುವ ಅಂಗನವಾಡಿ ಕಾರ್ಯಕರ್ತೆಯರ ಸಮಸ್ಯೆಗೆ ಸರ್ಕಾರ ಕಿವಿಗೊಡುತ್ತಿಲ್ಲ ಎಂದು ಅಸಮಾಧಾನ ವ್ಯಕ್ತಪಡಿಸಿದ ಅವರು, ಬಜೆಟ್‌ ಮೇಲೆ ಸಾಕಷ್ಟು ನಿರೀಕ್ಷೆಗಳಿದ್ದವು. ಮಹಿಳಾ ದಿನಾಚರಣೆಯಂದು ಮಂಡಿಸಿದ ಬಜೆಟ್‌ ಮಹಿಳಾ ವಿರೋಧಿ ಯಾಗಿದೆ ಎಂದು ದೂರಿದರು.

ಪ್ರಮುಖವಾಗಿ ಸೇವಾ ಜೇಷ್ಠತೆ ಆಧಾರದಲ್ಲಿ ಗೌರವ ಧನ ಬಿಡುಗಡೆಗೊಳಿಸುವುದು, ನಿವೃತ್ತಿ ಸೌಲಭ್ಯ ನೀಡುವುದು, ಮಿನಿ ಅಂಗನವಾಡಿ ಕೇಂದ್ರಗಳಿಗೆ ಸಹಾಯಕಿಯರ ನೇಮಕ, ಸಹಾಯಕಿಯರ ಗೌರವಧನ ವ್ಯತ್ಯಾಸ ಮೊತ್ತ ಬಿಡುಗಡೆ ಹಾಗೂ ಹೆಚ್ಚುವರಿ ಕೆಲಸ, ಸರ್ವೇ ಕಾರ್ಯಗಳಿಂದ ಕೈಬಿಡಬೇಕೆಂದು ಆಗ್ರಹಿಸಿದರು.

ಈ ವೇಳೆ ಸಂಘಟನೆ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಜೈಲಾಲ್‌ ತೋಟದ, ಚನ್ನಪ್ಪ ಆನೆಗುಂದಿ, ಅನಿತಾ ಹಿರೇಮಠ, ಕವಿತಾ ನಾಟೆಕಾರ, ಬಸವರಾಜ ದೊರೆ ಸೇರಿದಂತೆ ನೂರಾರು ಕಾರ್ಯಕರ್ತೆಯರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next