Advertisement

ಅಂಗನವಾಡಿ ಕಾರ್ಯಕರ್ತರ ಪ್ರತಿಭಟನೆ

01:10 PM Dec 22, 2021 | Team Udayavani |

ಶಹಾಬಾದ: ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಕರ್ನಾಟಕ ‌ ರಾಜ್ಯ ಅಂಗನವಾಡಿ ನೌಕರರ ಸಂಘದ ವತಿಯಿಂದ ಸಿಡಿಪಿಒ ಕಚೇರಿ ಎದುರು ಪ್ರತಿಭಟನೆ ನ‌ಡೆಸಲಾಯಿತು.

Advertisement

ರಾಜ್ಯದಲ್ಲಿ ಮಹಿಳೆಯರು ಮತ್ತು ಮಕ್ಕಳು ‌ ಸರ್ವತೋಮುಖ ಅಭಿವೃದ್ಧಿಗಾಗಿ ಅಂಗನವಾಡಿ ನೌಕರರು ಸದಾಕಾಲ ದುಡಿಯುತ್ತಿದ್ದಾರೆ. ಕೊರೊನಾ ಸಂದರ್ಭದಲ್ಲಿ ತಮ್ಮ ಜೀವದ‌ ಹಂಗು ತೊರೆದು ಶ್ರಮಿಸಿದ್ದಾರೆ. ಅದ‌ರಲ್ಲಿ 59 ಜನರು ಮೃತಪಟ್ಟಿದ್ದಾರೆ. ಕೆಲವು ಕುಟುಂಬಗಳಲ್ಲಿ ಒಬ್ಬಂಟಿಯಾಗಿದ್ದಾರೆ. ಅಲ್ಲದೇ ಮೇಲಿಂದ ಮೇಲೆ ವಿವಿಧ ಯೋಜನೆಗಳಲ್ಲಿ ಅಂಗನವಾಡಿ ನೌಕ‌ರರನ್ನು ಬಳಸಿಕೊಳ್ಳುತ್ತಿದ್ದರೂ ಅವರಿಗೆ ಸಿಗಬೇಕಾದ ಸೌಲಭ್ಯಗಳು ಸಿಕ್ಕಿಲ್ಲ. ಜ.10ರಂದು ಅಂಗನವಾಡಿ ಕೇಂದ್ರಗ‌ಳನ್ನು ಬಂದ್‌ ಮಾಡಿ ಮುಖ್ಯಮಂತ್ರಿ ಮನೆಗೆ ಚಲೋ ಹೋರಾಟ ನಡೆಸುತ್ತಿದ್ದೇವೆ ಎಂದರು.

ಅಂಗನವಾಡಿ ನೌಕರರ ಸಂಘದ ತಾಲೂಕಾಧ್ಯಕ್ಷರು ರುದ್ರಮ್ಮ ಕಟ್ಟೀಮನಿ, ಪ್ರಧಾನ ಕಾರ್ಯದರ್ಶಿ ಶೇಖಮ್ಮ ಕುರಿ, ಬಸಮ್ಮ ನಾಲವಾರ, ಪದ್ಮ ಶ‌ಹಾಬಾದ, ದಾನಮ್ಮ ಪೇಠಸಿರೂರ, ಪಾರ್ವತಿ ಕಟ್ಟಿಮನಿ, ಮಲ್ಲಮ್ಮ ಮರತೂರಕರ್‌ ಹಾಗೂ ಅಂಗನವಾಡಿ ಕಾರ್ಯಕರ್ತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next