Advertisement

ಬಯಸದೇ ಬಂದ ಭಾಗ್ಯದ ಮುಖ್ಯಮಂತ್ರಿಗಳೇ ನಮ್ಮ ಬೇಡಿಕೆ ಈಡೇರಿಸಿ: ಪೈಲ್ವಾನರ ಬೇಡಿಕೆ

11:28 AM Aug 16, 2021 | Team Udayavani |

ಬೆಂಗಳೂರು: “ಬಯಸದೇ ಬಂದ ಭಾಗ್ಯದ ಮುಖ್ಯಮಂತ್ರಿಗಳೇ ನಮ್ಮ ಬೇಡಿಕೆ ಈಡೇರಿಸಿ: ಎಂದು ಬ್ಯಾನರ್ ಹಿಡಿದು ಹಲವು ಪೈಲ್ವಾನರು ಮುಖ್ಯಮಂತ್ರಿಗಳ ಭೇಟಿಗೆ ಆಗಮಿಸಿದ್ದರು.

Advertisement

ತಮಗೆ ಮಾಸಾಶನ ಹೆಚ್ಚಿಸುವಂತೆ ಮನವಿ ಮಾಡಲು ಆರ್ ಟಿ ನಗರದ ಸಿಎಂ ಬಸವರಾಜ್ ಬೊಮ್ಮಾಯಿಗೆ ಮನವಿ ಮಾಡಲು ಆಗಮಿಸಿದ್ದರು. ರಾಜ್ಯದ ವಿವಿಧ ಭಾಗಗಳಿಂದ ಪೈಲ್ವಾನರು ಆಗಮಿಸಿದ್ದರು.

ಇದನ್ನೂ ಓದಿ:ಹೇಳಿಕೆಗಳಿಂದ ನಾಯಕನಾಗಲು ಸಾಧ್ಯವಾಗಲ್ಲ,ಕೆಲಸ ಮಾಡಬೇಕು: ವಿಜಯೇಂದ್ರ

ಮಾಸಾಶನ ಹೆಚ್ಚಿಸುವ ಬಗ್ಗೆ ಹಿಂದಿನ ಮುಖ್ಯಮಂತ್ರಿ ಯಡಿಯೂರಪ್ಪ ಮಾತು ಕೊಟ್ಟಿದ್ದರು. ಆದರೆ ಇನ್ನೂ ಮಾಸಾಶನ ಹೆಚ್ಚು ಮಾಡಿಲ್ಲ. ಅಧಿಕಾರಿಗಳಿಗೆ ಕೇಳಿದರೆ ಕೋವಿಡ್ ನೆಪ ಹೇಳುತ್ತಿದ್ದಾರೆ. ಹೀಗಾಗಿ ಇಂದು ನೂತನ ಸಿಎಂ ಭೇಟಿಗೆ ಬಂದಿದ್ದೇವೆ.

ಇವರು ಬಯಸದೇ ಬಂದ ಭಾಗ್ಯದಂತೆ ಸಿಎಂ ಆಗಿದ್ದಾರೆ. ಅದಕ್ಕಾಗಿ ಇವರು ನಮ್ಮ ಬೇಡಿಕೆ ಈಡೇರಿಸುತ್ತಾರೆ ಎಂದು ನಂಬಿದ್ದೇವೆ ಎಂದು ಪೈಲ್ವಾನರು ಹೇಳಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next