Advertisement

ಪಿಎಫ್‌ಐ ಕಾರ್ಯಕರ್ತರ ಪ್ರತಿಭಟನೆ

04:15 PM Sep 25, 2022 | Team Udayavani |

ಹುಮನಾಬಾದ: ಪಿಎಫ್‌ಐ ಕಚೇರಿ ಮೇಲೆ ಹಾಗೂ ಮುಖಂಡರ ಮನೆಗಳ ಮೇಲೆ ಎನ್‌ಐಎ ದಾಳಿ ಖಂಡಿಸಿ ಪಿಎಫ್‌ಐ ಕಾರ್ಯಕರ್ತರು ಪಟ್ಟಣದ ತಾಲೂಕು ಆಡಳಿತ ಕಚೇರಿ ಎದುರಿಗೆ ಶುಕ್ರವಾರ ಪ್ರತಿಭಟನೆ ನಡೆಸಿದರು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಪಿಎಫ್‌ಐ ಸಂಘಟನೆ ಜಿಲ್ಲಾಧ್ಯಕ್ಷ ಅಬ್ದುಲ್‌ ಕರೀಮ್‌, ಯಾವ ಕಾರಣಕ್ಕೆ ಪಿಎಫ್‌ಐ ಕಚೇರಿ ಹಾಗೂ ಮುಖಂಡರ ಬಂಧನ ಮಾಡಲಾಗುತ್ತಿದೆ. ಬಡವರ ಪರ ಕೆಲಸ ಮಾಡುತ್ತಿರುವ ಸಂಘಟನೆ ಮುಖಂಡರನ್ನು ಕೂಡಲೇ ಸರ್ಕಾರ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.

ಎಸ್‌ಡಿಪಿಐ ಮುಖಂಡ ಆಸೀಫ್‌ ಏಕ್ಬಾಲ್‌ ಮಾತನಾಡಿದರು. ಇದೇ ಸಂದರ್ಭದಲ್ಲಿ ಕೇಂದ್ರ ಸರ್ಕಾರ, ಎನ್‌ಐಎ, ಆರ್‌ಎಸ್‌ಎಸ್‌, ಬಿಜೆಪಿ ಮುಖಂಡರ ವಿರುದ್ಧ ಘೋಷಣೆ ಕೂಗಿದರು. ಈ ಸಂದರ್ಭದಲ್ಲಿ ಸಂಘಟನೆಗಳ ಮುಖಂಡರಾದ ಮಹ್ಮದ ಮಕ್ಸೂದ್‌, ಆಸೀಫ್‌ ಏಕ್‌ಬಾಲ್‌, ಮುಪ್ತಿ ತೌಸಿಫ್‌ ಖಾನ್‌, ಸೈಯದ್‌ ಇಬ್ರಾಹಿಮ್‌ ಸೇರಿದಂತೆ ಅನೇಕ ಕಾರ್ಯರ್ತರು ಪ್ರತಿಭಟನೆಯಲ್ಲಿ ಇದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

Advertisement

Udayavani is now on Telegram. Click here to join our channel and stay updated with the latest news.

Next