Advertisement

ಗ್ರಾಮೀಣ ಕೂಲಿ ಕಾರ್ಮಿಕರ ಪ್ರತಿಭಟನೆ

12:43 PM Jul 25, 2017 | |

ಹಗರಿಬೊಮ್ಮನಹಳ್ಳಿ: ಕೂಲಿ ಕಾರ್ಮಿಕರಿಗೆ ಹೆಚ್ಚುವರಿ 100 ದಿನಗಳ ಕೆಲಸ ಹಾಗೂ ಕೂಲಿ ಮೊತ್ತವನ್ನು ದಿನಕ್ಕೆ 400 ರೂ. ನೀಡುವಂತೆ ಆಗ್ರಹಿಸಿ ತಾಲೂಕು ಗ್ರಾಮೀಣ ಕೂಲಿ ಕಾರ್ಮಿಕರ ಸಂಘಟನೆ ಕಾರ್ಯಕರ್ತರು (ಗ್ರಾಕೂಸ್‌) ತಾಪಂ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

Advertisement

ಸಂಘಟನೆಯ ಸಂಚಾಲಕ ಕೋಗಳಿ ಮಲ್ಲೇಶ ಮಾತನಾಡಿ, ಸರಕಾರ ಕೂಲಿ ಕಾರ್ಮಿಕರಿಗೆ ಇನ್ನೂ 100 ದಿನಗಳ ಕಾಲ ಕೆಲಸ ನೀಡುವ ಮೂಲಕ ಕೂಲಿ ಕಾರ್ಮಿಕರಿಗೆ ನೆರವಾಗಬೇಕು. ಕೆಲಸವನ್ನು ನೀಡದೆ ಇದ್ದರೆ ಕೂಲಿ ಕಾರ್ಮಿಕರು ಬೇರೆಡೆ ಗುಳೆ ಹೋಗುವ ಭೀತಿ ಇದೆ. ಗುಳೆಯಿಂದ ಕೂಲಿ ಕಾರ್ಮಿಕರ ಮಕ್ಕಳ ಶೈಕ್ಷಣಿಕ ಗುಣಮಟ್ಟ ಕುಸಿಯುತ್ತಿದೆ. ಕೂಡಲೇ ಹೆಚ್ಚುವರಿ ಮಾನವ
ದಿನ ಹೆಚ್ಚಿಸಬೇಕು. ಕೂಲಿ ಕಾರ್ಮಿಕರಿಗೆ ವಾರಕ್ಕೊಮ್ಮೆ ಕೂಲಿ ನೀಡಬೇಕು. ಮುಂಗಾರು ಕೈಕೊಟ್ಟಿದ್ದರಿಂದ ರೈತರು ಹೊಲಗಳಲ್ಲಿ ಬಿತ್ತನೆ ಮಾಡದೇ ಮಳೆಗಾಗಿ ಕಾಯುತ್ತಿದ್ದಾರೆ. ಸರಕಾರ ಮೋಡ ಬಿತ್ತನೆಗೆ ಮುಂದಾಗಬೇಕು. ರಾಜ್ಯ ಸರಕಾರ ಸಹಕಾರಿ ಸಂಘಗಳಲ್ಲಿನ ಸಾಲ ಮನ್ನಾ ಮಾಡಿರುವುದು ಸ್ವಾಗಾತಾರ್ಹ. ಕೇಂದ್ರ ಸರಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಸಾಲ ಮನ್ನಾ ಮಾಡಲು ಮುಂದಾಗಬೇಕು ಎಂದರು.

ಪ್ರತಿಭಟನೆಯಲ್ಲಿ 2ಸಾವಿರಕ್ಕೂ ಅಧಿಕ ಸಂಖ್ಯೆಯಲ್ಲಿ ಕೂಲಿ ಕಾರ್ಮಿಕರು ಭಾಗವಹಿಸಿದ್ದರು. ಪಟ್ಟಣದ ಈಶ್ವರ ದೇವಸ್ಥಾನದಿಂದ ಬಸವೇಶ್ವರ ರಸ್ತೆಯಲ್ಲಿ ಘೋಷಣೆ ಕೂಗುತ್ತಾ ಪ್ರತಿಭಟನೆ ನಡೆಸಿದರು. ಪ್ರತಿಭಟನೆಯಲ್ಲಿ ಗ್ರಾಕೂಸ್‌ ತಾಲೂಕು ಅಧ್ಯಕ್ಷ ನೆಲ್ಕುದ್ರಿ ದೊಡ್ಡಬಸಪ್ಪ, ಮೈಲಪ್ಪ ಅಂಕಸಮುದ್ರ, ಮೇಘರಾಜ, ರಿಜ್ವಾನ್‌, ಉಮೇಶ್‌ ಕೋಗಳಿ, ಅಕ್ಕಮಹಾದೇವಿ, ಹನುಮಂತ ಇಟಗಿ, ಕೋಗಳಿ ಕಮಲಮ್ಮ, ಗಂಗಮ್ಮ, ಕೊಟ್ರಮ್ಮ ಇತರರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next