Advertisement
ಕಳೆದ ಮೂರು ದಿನಗಳಿಂದ ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸಿದ್ದರು ಆದರೆ ಸರ್ಕಾರ ಮುಷ್ಕರವನ್ನು ನಿಲ್ಲಿಸಲು ನಾನಾ ಪ್ರಯತ್ನ ನಡೆಸಿದರು ಪ್ರಯೋಜನವಾಗಲಿಲ್ಲ ಅಂತಿಮವಾಗಿ ಸರಕಾರ ಸಾರಿಗೆ ನೌಕರರ ಕೆಲವೊಂದು ಬೇಡಿಕೆಗಳನ್ನು ಈಡೇರಿಸುವುದಾಗಿ ಚರ್ಚೆಯಲ್ಲಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಮುಖಂಡರು ಮುಷ್ಕರ ಹಿಂಪಡೆಯುವ ನಿರ್ಧಾರ ಕೈಗೊಂಡಿದ್ದಾರೆ.
Related Articles
– ಕೋವಿಡ್ ಸೋಂಕಿನಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಕ್ಕೆ ೩೦ ಲಕ್ಷ ರೂಪಾಯಿಗಳನ್ನು ನೀಡಲಾಗುವುದು.
– ಅಂತರ್ ನಿಗಮ ವರ್ಗಾವಣೆ ಕುರಿತು ಸೂಕ್ತ ನೀತಿ ರಚಿಸಲು ತೀರ್ಮಾನ.
– ತರಬೇತಿಯಲ್ಲಿರುವ ನೌಕರರ ತರಬೇತಿ ಅವಧಿಯನ್ನು 2 ವರ್ಷದಿಂದ 1 ವರ್ಷಕ್ಕೆ ಇಳಿಸಲು ತೀರ್ಮಾನ
– ನಿಗಮದಲ್ಲಿ ಹೆಚ್ ಆರ್ ಎಂ ಎಸ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.
– ಸಿಬ್ಬಂದಿಗೆ ಕರ್ತವ್ಯ ನಿರ್ವಹಿಸಿದ ಸಂದರ್ಭ ಅವರಿಗೆ ಸೂಕ್ತ ಭತ್ಯೆ ನೀಡಲು ತೀರ್ಮಾನ.
– ನೌಕರರಿಗೆ ಕಿರುಕುಳ ತಪ್ಪಿಸಲು ಸೂಕ್ತ ಆಡಳಿತ ವ್ಯವಸ್ಥೆಯನ್ನು ರೂಪಿಸುವುದು.
– ಸರಕಾರದ ಆರ್ಥಿಕ ಸುಧಾರಣೆಯ ಬಳಿಕ ೬ ನೇ ವೇತನ ಆಯೋಗ ಶಿಫಾರಸ್ಸು ಮಾಡಲಾಗುವುದು.
Advertisement