Advertisement

ಸಾರಿಗೆ ನೌಕರರೊಂದಿಗೆ ಸರ್ಕಾರದ ಸಂಧಾನ ಸಕ್ಸಸ್ : ಇಂದಿನಿಂದಲೇ ಬಸ್ ಸಂಚಾರ ಆರಂಭ

07:02 PM Dec 13, 2020 | sudhir |

ಬೆಂಗಳೂರು : ರಾಜ್ಯಾದ್ಯಂತ ಸಾರಿಗೆ ನೌಕರರು ಕಳೆದ ಮೂರು ದಿನಗಳಿಂದ ನಡೆಸುತ್ತಿದ್ದ ಮುಷ್ಕರ ಇಂದು ಅಂತ್ಯಗೊಂಡಿದೆ.

Advertisement

ಕಳೆದ ಮೂರು ದಿನಗಳಿಂದ ಸಾರಿಗೆ ನೌಕರರು ತಮ್ಮ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ಮುಷ್ಕರ ನಡೆಸಿದ್ದರು ಆದರೆ ಸರ್ಕಾರ ಮುಷ್ಕರವನ್ನು ನಿಲ್ಲಿಸಲು ನಾನಾ ಪ್ರಯತ್ನ ನಡೆಸಿದರು ಪ್ರಯೋಜನವಾಗಲಿಲ್ಲ ಅಂತಿಮವಾಗಿ ಸರಕಾರ ಸಾರಿಗೆ ನೌಕರರ ಕೆಲವೊಂದು ಬೇಡಿಕೆಗಳನ್ನು ಈಡೇರಿಸುವುದಾಗಿ ಚರ್ಚೆಯಲ್ಲಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಸಾರಿಗೆ ನೌಕರರ ಮುಖಂಡರು ಮುಷ್ಕರ ಹಿಂಪಡೆಯುವ ನಿರ್ಧಾರ ಕೈಗೊಂಡಿದ್ದಾರೆ.

ಸಾರಿಗೆ ನೌಕರರ ಮುಖಂಡರು ಸರಕಾರದ ಮುಂದೆ ಹಲವು ಬೇಡಿಕೆಗಳನ್ನು ಇಟ್ಟಿದ್ದು ಅದರಲ್ಲಿ ಎಂಟು ಬೇಡಿಕೆಗಳಿಗೆ ಒಪ್ಪಿಗೆ ನೀಡಿದ್ದಾರೆ.

ಹಾಗಾದರೆ ಚರ್ಚೆಯಲ್ಲಿ ಸರಕಾರ ಯಾವೆಲ್ಲ ನಿರ್ಣಯಗಳನ್ನು ಕೈಗೊಂಡಿದೆ ನೋಡೋಣ ;

– ನಿಗಮ ನೌಕರರಿಗೆ ಅರೋಗ್ಯ ಸಂಜೀವಿನಿ ವಿಮಾ ಯೋಜನೆಯನ್ನು ಅಳವಡಿಸಲು ತೀರ್ಮಾನಿಸಲಾಗಿದೆ.
– ಕೋವಿಡ್ ಸೋಂಕಿನಿಂದ ಮೃತಪಟ್ಟ ಸಾರಿಗೆ ನೌಕರರ ಕುಟುಂಬಕ್ಕೆ ೩೦ ಲಕ್ಷ ರೂಪಾಯಿಗಳನ್ನು ನೀಡಲಾಗುವುದು.
– ಅಂತರ್ ನಿಗಮ ವರ್ಗಾವಣೆ ಕುರಿತು ಸೂಕ್ತ ನೀತಿ ರಚಿಸಲು ತೀರ್ಮಾನ.
– ತರಬೇತಿಯಲ್ಲಿರುವ ನೌಕರರ ತರಬೇತಿ ಅವಧಿಯನ್ನು 2 ವರ್ಷದಿಂದ 1 ವರ್ಷಕ್ಕೆ ಇಳಿಸಲು ತೀರ್ಮಾನ
– ನಿಗಮದಲ್ಲಿ ಹೆಚ್ ಆರ್ ಎಂ ಎಸ್ ವ್ಯವಸ್ಥೆಯನ್ನು ಜಾರಿಗೊಳಿಸಲಾಗುವುದು.
– ಸಿಬ್ಬಂದಿಗೆ ಕರ್ತವ್ಯ ನಿರ್ವಹಿಸಿದ ಸಂದರ್ಭ ಅವರಿಗೆ ಸೂಕ್ತ ಭತ್ಯೆ ನೀಡಲು ತೀರ್ಮಾನ.
– ನೌಕರರಿಗೆ ಕಿರುಕುಳ ತಪ್ಪಿಸಲು ಸೂಕ್ತ ಆಡಳಿತ ವ್ಯವಸ್ಥೆಯನ್ನು ರೂಪಿಸುವುದು.
– ಸರಕಾರದ ಆರ್ಥಿಕ ಸುಧಾರಣೆಯ ಬಳಿಕ ೬ ನೇ ವೇತನ ಆಯೋಗ ಶಿಫಾರಸ್ಸು ಮಾಡಲಾಗುವುದು.

Advertisement
Advertisement

Udayavani is now on Telegram. Click here to join our channel and stay updated with the latest news.

Next