Advertisement
ಸಾಹಿತಿ ಭಗವಾನ ತಮ್ಮ ವಿವಾದಾತ್ಮಕ ಹೇಳಿಕೆ ಮೂಲಕ ಸಮಾಜದಲ್ಲಿ ಅಶಾಂತಿ ಸೃಷ್ಟಿಸಿದರೂ ರಾಜ್ಯ ಸರ್ಕಾರ ಕಾನೂನು ಕ್ರಮ ಕೈಗೊಳ್ಳದೇ ಅವರಿಗೆ ಭದ್ರತೆಯೊದಗಿಸುತ್ತಿದೆ ಎಂದು ಪೇಜಾವರ ಶ್ರೀ ಸೇನೆ ಮಹಿಳಾ ಘಟಕದ ಅಧ್ಯಕ್ಷೆ ದಿವ್ಯಾ ಹಾಗರಗಿ ಆರೋಪಿಸಿದರು. ಮುಖ್ಯಮಂತ್ರಿ ಕುಮಾರಸ್ವಾಮಿ ಅವರಿಗೆ ಸಾಹಿತಿ ಭಗವಾನ ಬೇಕಿದ್ದರೆ ಅವರನ್ನು ತಮ್ಮ ಬಳಿಯಲ್ಲೇ ಇಟ್ಟುಕೊಳ್ಳಲಿ. ಅದನ್ನು ಬಿಟ್ಟು ಸಾರ್ವಜನಿಕ ವೇದಿಕೆಗಳಲ್ಲಿ ಶ್ರೀರಾಮನ ಬಗ್ಗೆ ಬಾಯಿಗೆ ಬಂದಂತೆ ಮಾತಾಡುವುದು ಸರಿಯಲ್ಲ. ರಾಜ್ಯ ಸರ್ಕಾರ ಭಗವಾನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಬೇಕು. ಅವರ ಕೃತಿ ಮುಟ್ಟುಗೋಲು ಹಾಕಿಕೊಳ್ಳಬೇಕೆಂದು ಆಗ್ರಹಿಸಿದರು. ಭಗವಾನ ವಿರುದ್ಧ ಕ್ರಮ ಕೈಗೊಳ್ಳದಿದ್ದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಪ್ರತಿಭಟನಾಕಾರರು ಎಚ್ಚರಿಸಿದರು. ಪ್ರತಿಭಟನೆಯಲ್ಲಿ ಎಂ.ಎಸ್.ಪಾಟೀಲ ನರಿಬೋಳ, ದಿವ್ಯಾಹಾಗರಗಿ, ಮಲ್ಲಿಕಾರ್ಜುನ ಸಾರವಾಡ, ಲಕ್ಷ್ಮೀಕಾಂತ ಸ್ವಾದಿ, ರವಿ ಪಾಟೀಲ ದೇಗಾಂವ, ಸಂಗಮೇಶ ಶೆಳ್ಳಗಿ, ಮಮತಾ ಡೊಳ್ಳೆ ಪಾಲ್ಗೊಂಡಿದ್ದರು. Advertisement
ಭಗವಾನ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಪ್ರತಿಭಟನೆ
05:32 AM Jan 11, 2019 | |
Advertisement
Udayavani is now on Telegram. Click here to join our channel and stay updated with the latest news.