Advertisement
ನಗರದಲ್ಲಿ ಪ್ರತಿಭಟನೆ ನಡೆಸಿದ ಕಬ್ಬು ಬೆಳೆಗಾರರು, ಜಿಲ್ಲೆ ಸಕ್ಕರೆ ಕಾರ್ಖಾನೆಗಳು ನವೆಂಬರ್ ಮೊದಲ ವಾರದಲ್ಲಿ ಸಕ್ಕರೆ ಕಾರ್ಖಾನೆ ಆರಂಭಿಸಿ, ಮಾರ್ಚ್ ಅಂತ್ಯಕ್ಕೆ22 ಲಕ್ಷ ಟನ್ ಕಬ್ಬು ನುರಿಸಿವೆ.ಡಿಸೆಂಬರ್ ವೇಳೆಗೆ ನಿಯಮದ ಪ್ರಕಾರ ರೈತರಿಗೆ ಬಿಲ್ ಪಾವತಿಸಬೇಕು.
ಎಂದು ಕಬ್ಬು ಬೆಳೆಗಾರರ ಸಂಘದ ಜಿಲ್ಲಾಧ್ಯಕ್ಷ ಶ್ರೀಮಂತ ದುದ್ದಗಿ, ಪ್ರಧಾನ ಕಾರ್ಯದರ್ಶಿ ರಾಜು ಗುಂದಗಿ, ಬಾಬು
ಕೋತಂಬರಿ ದೂರಿದರು. ಜಿಲ್ಲೆಯ ಎಲ್ಲಾ ಸಕ್ಕರೆ ಕಾರ್ಖಾನೆಗಳು 229 ಕೋಟಿ ರೂ. ಬಾಕಿ ಉಳಿಸಿಕೊಡಿದ್ದು, ಜಿಲ್ಲಾಧಿಕಾರಿಗಳು ವಾರದೊಳಗೆ ಸಕ್ಕರೆ ಕಾರ್ಖಾನೆಗಳ ಮಾಲಿಕರಿಗೆ ಕಟ್ಟುನಿಟ್ಟಿನ ಸೂಚನೆ ನೀಡಿ ಹಿಂಬಾಕಿ ಪಾವತಿಗೆ ಕ್ರಮ ಕೈಗೊಳ್ಳಬೇಕು. ಪಾವತಿ ಮಾಡದಿದ್ದಲ್ಲಿ ಸಕ್ಕರೆ ಕಾರ್ಖಾನೆಗಳ ಮೇಲೆ ಶಿಸ್ತು ಕ್ರಮಕ್ಕೆ ಮುಂದಾಗಬೇಕು. ಜಿಲ್ಲಾಡಳಿತ ತ್ವರಿತ ಗತಿಯಲ್ಲಿ ಕ್ರಮ ಕೈಗೊಳ್ಳದಿದ್ದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕುವುದಾಗಿ ಎಚ್ಚರಿಸಿದರು.
Related Articles
ಭೀಮಾಶಂಕರ ಸಹಕಾರಿ ಶುಗರ್ 17.56 ಕೋಟಿ ರೂ. ಬಾಕಿ ಉಳಿಸಿಕೊಂಡಿವೆ ಎಂದು ದೂರಿದ್ದಾರೆ.
Advertisement
ಕಬ್ಬು ಬೆಳೆಗಾರರಿಗೆ ಏಕರೂಪದ ಬೆಲೆ ನೀಡದೇ ಹಾಗೂ ಏಕ ಸ್ವರೂಪದ ನಿಯಮ ಪಾಲಿಸದೇ ಕಳೆದ ಒಂದು ದಶಕದಿಂದ ಸಕ್ಕರೆ ಕಾರ್ಖಾನೆಗಳು ಕಬ್ಬು ಬೆಳೇಗಾರರನ್ನು ವಂಚಿಸುತ್ತಿವೆ. ಹೀಗಾಗಿ ರೈತರಿಗೆ ಮೋಸ ಮಾಡುವ ಸಕ್ಕರೆ ಕಾರ್ಖಾನೆಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.
ಕೇಂದ್ರ ಸರಕಾರ ಕಬ್ಬು ಬೆಳೆದ ರೈತರಿಗೆ ಪ್ರೋತ್ಸಾಹ ನೀಡಲು 10 ಸಾವಿರ ಕೋಟಿ ರೂ. ಹಣ ನೀಡಿದ್ದರೂ ಸ್ವಾಗತಾರ್ಹ. ಅದೇ ರೀತಿ ರಾಜ್ಯ ಸರಕಾರ ಕಬ್ಬು ಬೆಳೆಗಾರರ ಪ್ರೋತ್ಸಾಹಕ್ಕಾಗಿ ಆರ್ಥಿಕ ನೆರವು ನೀಡಬೇಕು. ಮತ್ತೂಂದೆಡೆ ರೈತರ ಸಂಪೂರ್ಣ ಕೃಷಿ ಸಾಲ ಮನ್ನಾ ಮಾಡಬೇಕು ಎಂದು ಆಗ್ರಹಿಸಿದರು.