Advertisement

ಖಾತ್ರಿ ಕೆಲಸಕ್ಕೆ ಆಗ್ರಹಿಸಿ ಪ್ರತಿಭಟನೆ

02:36 PM Feb 04, 2022 | Team Udayavani |

ಶಹಾಬಾದ: ವಿವಿಧ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿ ವತಿಯಿಂದ ಹೊನಗುಂಟಾ ಗ್ರಾಪಂ ಕಾರ್ಯದರ್ಶಿಗೆ ಮನವಿ ಸಲ್ಲಿಸಲಾಯಿತು.

Advertisement

ಈ ಸಂದರ್ಭದಲ್ಲಿ ಮಾತನಾಡಿದ ಪ್ರತಿಭಟನಾಕಾರರು, ಹೊನಗುಂಟಾ ಗ್ರಾಮದ ಕೂಲಿ ಕಾರ್ಮಿಕರು ಕೆಲಸಕ್ಕಾಗಿ ಅರ್ಜಿ ಸಲ್ಲಿಸಿದ್ದಾರೆ. ಆದರೂ ಉದ್ಯೋಗ ಖಾತ್ರಿಯಲ್ಲಿ ಕೆಲಸ ನೀಡುತ್ತಿಲ್ಲ. ಇದರಿಂದ ಕೂಲಿಕಾರರ ಬದುಕಿನ ಮೇಲೆ ಪರಿಣಾಮ ಬೀರುತ್ತಿದೆ. ಕೂಡಲೇ ಕೆಲಸ ನೀಡಬೇಕು ಎಂದು ಆಗ್ರಹಿಸಿದರು.

ಗ್ರಾಪಂ ವ್ಯಾಪ್ತಿಗೆ ಬರುವ ಅಂಗನವಾಡಿ, ಆರೋಗ್ಯ ಕೇಂದ್ರಗಳಿಗೆ ಹಾಗೂ ಸರ್ಕಾರಿ ಶಾಲೆಗಳಿಗೆ ಶೌಚಾಲಯ, ಶುದ್ಧ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಡಬೇಕು. ಗ್ರಾಮದಲ್ಲಿ ಚರಂಡಿಗಳನ್ನು ಶುಚಿಗೊಳಿಸಬೇಕು. ಚರಂಡಿ ನೀರನ್ನು ನದಿಗೆ ಸೇರದಂತೆ ನೋಡಿಕೊಳ್ಳಬೇಕು. ಕೂಡಲೇ ಬೀದಿ ದೀಪಗಳ ನಿರ್ವಹಣೆ ಮಾಡಬೇಕು. ಇಲ್ಲದಿದ್ದರೆ ಗ್ರಾ.ಪಂ ಎದುರು ಪ್ರತಿಭಟನೆ ಮಾಡಲಾಗುವುದೆಂದು ಎಚ್ಚರಿಕೆ ನೀಡಿದರು.

ಕರ್ನಾಟಕ ಪ್ರಾಂತ ರೈತ ಸಂಘದ ತಾಲೂಕು ಸಮಿತಿ ಸಂಚಾಲಕ ರಾಯಪ್ಪ ಹುರಮುಂಜಿ, ಭೂತಾಳಿ ಪೂಜಾರಿ, ಸಾಯಬಣ್ಣ ಪೂಜಾರಿ, ಶರಣು ಬನ್ನೆಪ್ಪ, ಉಮೇಶ, ವಿಶ್ವರಾಜ ಫಿರೋಜಬಾದ ಇತರರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next