Advertisement

ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ಕೃಷಿ ಸಾಲ ಮನ್ನಾಕ್ಕಾಗಿ ಪ್ರತಿಭಟನೆ

11:28 AM Jul 12, 2017 | |

ಬೆಂಗಳೂರು: ರಾಜ್ಯ ಸರ್ಕಾರ ರೈತರ ಸಾಲ ಮನ್ನಾ ಮಾಡಿದಂತೆ ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿನ ರೈತರ ಸಾಲ ಮನ್ನಾ ಮಾಡಬೇಕೆಂದು ಆಗ್ರಹಿಸಿ ಯುವ ಕಾಂಗ್ರೆಸ್‌ ಸದಸ್ಯರು ನಗರದಲ್ಲಿ ಕೇಂದ್ರ ಸಚಿವ ಅನಂತಕುಮಾರ್‌ ನಿವಾಸದ ಎದುರು ಮಂಗಳವಾರ ಪ್ರತಿಭಟನೆ ನಡೆಸಿದರು.

Advertisement

 ಪ್ರತಿಭಟನೆ ನೇತೃತ್ವ ವಹಿಸಿದ್ದ ಯುವ ಕಾಂಗ್ರೆಸ್‌ ಅಧ್ಯಕ್ಷ ಬಸನಗೌಡ ಬಾದರ್ಲಿ, ರಾಜ್ಯ ಸರ್ಕಾರ ಸಹಕಾರಿ ಬ್ಯಾಂಕ್‌ಗಳ ಸಾಲ ಮನ್ನಾ ಮಾಡಿದಂತೆ ಕೇಂದ್ರ ಸರ್ಕಾರ ರಾಷ್ಟ್ರೀಕೃತ ಬ್ಯಾಂಕ್‌ಗಳಲ್ಲಿ ರೈತರು ಪಡೆದ ಸಾಲ ಮನ್ನಾ ಮಾಡಬೇಕು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್‌. ಯಡಿಯೂರಪ್ಪ ಹೋದಲ್ಲೆಲ್ಲಾ ರಾಜ್ಯ ಸರ್ಕಾರದ ವಿರುದ್ದ ಹೋರಾಟ ಮಾಡುವುದಾಗಿ ಹೇಳಿದ್ದರು. ಈಗ ಅವರು ಪ್ರಧಾನಿ ಮೋದಿ ಬಳಿಗೆ ಹೋಗಿ ರಾಜ್ಯದ ರೈತರ ಸಾಲ ಮನ್ನಾ ಮಾಡುವಂತೆ ಒತ್ತಡ ಹೇರಬೇಕು ಎಂದು ಆಗ್ರಹಿಸಿದರು.

ರಾಜ್ಯದ ಬಿಜೆಪಿ ಸಂಸದರು ಹಾಗೂ ಕೇಂದ್ರ ಸಚಿವರು ಸಾಲಮನ್ನಾ ವಿಚಾರದಲ್ಲಿ ಪ್ರಧಾನಿ ಮೇಲೆ ಒತ್ತಡ ಹೇರಬೇಕು. ಇಲ್ಲದಿದ್ದರೆ ಎಲ್ಲ ಸಂಸದರ ಮನೆ ಮುಂದೆ ಧರಣಿ ನಡೆಸಲಾಗುವುದು. ಜತೆಗೆ ಕೇಂದ್ರ ಸರ್ಕಾರದ ವಿರುದ್ಧ ರಾಜ್ಯಾದ್ಯಂತ ಹೋರಾಟ ನಡೆಸಲಾಗುವುದು ಎಂದು ಅವರು ಹೇಳಿದರು.

Advertisement

Udayavani is now on Telegram. Click here to join our channel and stay updated with the latest news.

Next