Advertisement

ಮಾಸಾಶನಕ್ಕೆ ಒತ್ತಾಯಿಸಿ ಪ್ರತಿಭಟನೆ

11:50 AM Apr 25, 2020 | Team Udayavani |

ಹುಬ್ಬಳ್ಳಿ: ಕಳೆದ ಮೂರು ತಿಂಗಳಿಂದ ಅಂಗವಿಕಲರಿಗೆ ಮಾಸಾಶನ ಬರುತ್ತಿಲ್ಲ. ವಿಶೇಷ ಪ್ಯಾಕೇಜ್‌ ಘೋಷಣೆಯಾದರೂ ಇದುವರೆಗೂ ಜಾರಿಯಾಗಿಲ್ಲ ಎಂದು ಖಂಡಿಸಿ ಅಂಗವಿಕಲರು ಶುಕ್ರವಾರ ಸಾಂಕೇತಿಕ ಪ್ರತಿಭಟನೆ ನಡೆಸಿ ತಹಶೀಲ್ದಾರರಿಗೆ ಮನವಿ ಸಲ್ಲಿಸಿದರು.

Advertisement

ಲಾಕ್‌ಡೌನ್‌ ಹಿನ್ನೆಲೆಯಲ್ಲಿ ಅಂಗವಿಕಲರು, ನಿರಾಶ್ರಿತರು, ನಿರ್ಗತಿಕರು, ದಿನಗೂಲಿ ನೌಕರರು ಆರ್ಥಿಕ ಸಂಕಷ್ಟದಲ್ಲಿ ಇದ್ದಾರೆ. ಕಳೆದ ಎರಡು-ಮೂರು ತಿಂಗಳುಗಳಿಂದ ಮಾಸಾಶನ ಬರುತ್ತಿಲ್ಲ. ಕೂಡಲೇ ಜಿಲ್ಲಾಧಿಕಾರಿಗಳು ಇತ್ತ ಗಮನ ಹರಿಸಿ ಅಂಗವಿಕಲರ ಸಮಸ್ಯೆ ಬಗೆಹರಿಸಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next