Advertisement

ಕಾರ್ಯದರ್ಶಿ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

12:25 PM Nov 15, 2019 | Team Udayavani |

ಬೆಳಗಾವಿ: ಸಂವಿಧಾನವನ್ನು ಅಂಬೇಡ್ಕರ್‌ ಒಬ್ಬರೇ ರಚನೆ ಮಾಡಿಲ್ಲ ಎಂದು ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಉಮಾಶಂಕರ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿ ವಿವಿಧ ದಲಿತ ಸಂಘಟನೆಗಳ ಒಕ್ಕೂಟ ವತಿಯಿಂದ ಗುರುವಾರ ಪ್ರತಿಭಟನೆ ನಡೆಸಲಾಯಿತು.

Advertisement

ನಗರದಲ್ಲಿ ಪ್ರತಿಭಟನಾ ರ್ಯಾಲಿ ನಡೆಸಿ ಚನ್ನಮ್ಮ ವೃತ್ತದಲ್ಲಿ ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ ಕಾರ್ಯಕರ್ತರು, ಶಿಕ್ಷಣ ಇಲಾಖೆ ಡಾ| ಬಾಬಾಸಾಹೇಬ ಅಂಬೇಡ್ಕರ್‌ ಅವರನ್ನು ಅವಮಾನಿಸಿದೆ. ಸಂವಿಧಾನ ರಚಿಸಲು ಅಂಬೇಡ್ಕರ್‌ ಅವರು ಸಾಕಷ್ಟು ಶ್ರಮವಹಿಸಿದ್ದಾರೆ. ಅವರಿಂದಲೇ ಸಂವಿಧಾನ ರಚನೆಯಾಗಿದೆ. ಆದರೆ ಇಂತಹ ಸುತ್ತೋಲೆ ಹೊರಡಿಸುವ ಮೂಲಕ ರಾಜ್ಯ ಸರ್ಕಾರ ಮಕ್ಕಳಲ್ಲಿ ವಿಷ ಬೀಜ ಬಿತ್ತಲು ಹೊರಟಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅಚಾತುರ್ಯದ ನೈತಿಕ ಹೊಣೆ ಹೊತ್ತು ಸಚಿವ ಸುರೇಶಕುಮಾರ್‌ ರಾಜೀನಾಮೆ ನೀಡಬೇಕು. ಉಮಾಶಂಕರ ಅವರನ್ನು ವಜಾಗೊಳಿಸಬೇಕು ಎಂದು ಆಗ್ರಹಿಸಿದರು. ಡಾ| ಬಾಬಾಸಾಹೇಬ ಅಂಬೇಡ್ಕರ್‌ ಯುವ ಮಂಚದ ಜಿಲ್ಲಾಧ್ಯಕ್ಷ ಗಜಾನನ ದೇವರಮನಿ, ದುಗೇಶ ಮೇತ್ರಿ, ಗಜಾನನ ಧರನಟ್ಟಿ, ಮಹೇಶ ಚೌಗುಲೆ ಸೇರಿದಂತೆ ಕಾರ್ಯಕರ್ತರು ಇದ್ದರು.

Advertisement

Udayavani is now on Telegram. Click here to join our channel and stay updated with the latest news.

Next