Advertisement

ಹಲಗಾ-ಮಚ್ಛೆ ಬೈಪಾಸ್ ರಸ್ತೆಗೆ ವಿರೋಧಿಸಿ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ ರೈತ!

12:41 PM Nov 11, 2021 | Team Udayavani |

ಬೆಳಗಾವಿ: ಹಲಗಾ ಮಚ್ಛೆ ಬೈಪಾಸ್ ರಸ್ತೆ ನಿರ್ಮಾಣ ವಿರೋಧಿಸಿ ರೈತರು ನಡೆಸುತ್ತಿರುವ ಪ್ರತಿಭಟನೆ ವೇಳೆ ರೈತರ ಮೇಲೆ ಪೆಟ್ರೋಲ್ ಸುರಿದುಕೊಂಡು ಆತ್ಮಹತ್ಯೆಗೆ ಯತ್ನಿಸಿದ ಘಟನೆ ಗುರುವಾರ ಬೆಳಿಗ್ಗೆ ಬೈಪಾಸ್ ಬಳಿ ನಡೆದಿದೆ.

Advertisement

ಆಕಾಶ ಅನಗೋಳಕರ ಎಂಬ ರೈತ ಬೆಂಕಿ ಹಚ್ಚಿಕೊಂಡಿದ್ದು, ಕೂಡಲೇ ಸ್ಥಳದಲ್ಲಿದ್ದ ರೈತರು ತಡೆದಿದ್ದಾರೆ.‌ ಈತನನ್ನು‌ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.

ರೈತರ ಪ್ರತಿಭಟನೆ ತೀವ್ರಗೊಂಡಿದ್ದು, ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರದ ವಿರುದ್ಧ ರೈತರು ಹಾಗೂ ರೈತ ಮಹಿಳೆಯರು ಆಕ್ರೋಶ ವ್ಯಕ್ತಪಡಿಸಿದರು.‌ ಈ ವೇಳೆ ರೈತರು ಹಾಗೂ ರೈತ ಮಹಿಳೆಯರನ್ನು ಪೊಲೀಸರು ವಶಕ್ಕೆ ಪಡೆದುಕೊಂಡರು. ಸ್ಥಳದಲ್ಲಿ ಬಿಗುವಿನ ವಾತಾವರಣವಿದ್ದು, ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಇದನ್ನೂ ಓದಿ:ಬಿಟ್ ಕಾಯಿನ್; ಆರೋಪ ಬಿಟ್ಟು ಕಾಂಗ್ರೆಸ್ ನಾಯಕರು ದಾಖಲೆ ಬಿಡುಗಡೆ ಮಾಡಲಿ: ಶೆಟ್ಟರ್ ಸವಾಲು

ಪೊಲೀಸರು ಧರಣಿ ನಿರತ ರೈತರನ್ನು ಹಾಗೂ ಮಹಿಳೆಯರನ್ನು ವಶಕ್ಕೆ ಪಡೆಯುವ ವೇಳೆ ಎಳೆದಾಡಿದ್ದಾರೆ. ಸೀರೆ ಹರಿದಿದ್ದಾರೆ ಎಂದು ಮಹಿಳೆಯರು ಆರೋಪಿಸಿದರು.

Advertisement
Advertisement

Udayavani is now on Telegram. Click here to join our channel and stay updated with the latest news.

Next