Advertisement

ವಾಯುವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳ ನಿರ್ಲಕ್ಷ್ಯ ಆರೋಪ:ಹುಬ್ಬಳ್ಳಿ ಕಚೇರಿಯೆದುರು ಪ್ರತಿಭಟನೆ

12:54 PM Jun 07, 2021 | Team Udayavani |

ಹುಬ್ಬಳ್ಳಿ: ಆರನೇ ವೇತನ ಆಯೋಗ ಜಾರಿಗೆ ಒತ್ತಾಯಿಸಿ ಪ್ರತಿಭಟನೆ ಹಿನ್ನೆಲೆಯಲ್ಲಿ ವಜಾ, ಅಮಾನತ್ತು ಹಾಗೂ ವರ್ಗಾವಣೆ ಮಾಡಿದ ಆದೇಶಗಳನ್ನು ರದ್ದುಗೊಳಿಸಲು ವಾಯವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳು ನಿರ್ಲಕ್ಷ್ಯ ಮಾಡುತ್ತಿದ್ದಾರೆ ಎಂದು ಆರೋಪಿಸಿ ಕೆ.ಎಸ್.ಆರ್.ಟಿ.ಸಿ ನೌಕರರ ಕೂಟದಿಂದ ಇಲ್ಲಿನ ಕೇಂದ್ರ ಕಚೇರಿ ಮುಂಭಾಗದಲ್ಲಿ ಸಾಂಕೇತಿಕ ಧರಣಿ ಹಮ್ಮಿಕೊಂಡಿದ್ದಾರೆ‌.

Advertisement

ಇದನ್ನೂ ಓದಿ:ಶೀಘ್ರದಲ್ಲೇ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ವಿಶ್ವಾಸವಿದೆ: ಕೇಂದ್ರ ಸರ್ಕಾರ

ಮುಷ್ಕರ ಸಮಯದಲ್ಲಿ ಕೈಗೊಂಡಿದ್ದ ಶಿಸ್ತು ಕ್ರಮಗಳನ್ನು ನಿಗದಿತ ಸಮಯದೊಳಗೆ ಇತ್ಯರ್ಥಗೊಳಿಸುವಂತೆ ಹೈಕೋರ್ಟ್ ಸೂಚನೆ ನೀಡಿದೆ. ಆದರೆ ವಾಯವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳು ಕೋರ್ಟ್ ಆದೇಶ ಉಲ್ಲಂಘನೆ ಮಾಡುತ್ತಿದ್ದಾರೆ. ಈಗಾಗಲೇ ಕೆ.ಎಸ್.ಆರ್.ಟಿ.ಸಿ ಹಾಗೂ ಬಿಎಂಟಿಸಿಯಲ್ಲಿ ಆದೇಶ ಸಂಪೂರ್ಣ ಪಾಲನೆ ಮಾಡಿದ್ದಾರೆ. ಆದರೆ ವಾಯವ್ಯ ಸಾರಿಗೆ ಸಂಸ್ಥೆ ಅಧಿಕಾರಿಗಳು ಉದ್ದೇಶ ಪೂರ್ವಕವಾಗಿ ಕಾರ್ಮಿಕರಿಗೆ ಕಿರುಕುಳ ನೀಡುವ ಉದ್ದೇಶದಿಂದ  ಆದೇಶ ಪಾಲನೆ ಮಾಡುತ್ತಿಲ್ಲ. ಸಾರಿಗೆ ನೌಕರರಿಗೆ ವೇತನ ಪಾವತಿ ಮಾಡುವಂತೆ ಅನುದಾನ ನೀಡಿದರೂ ಇಲ್ಲಿನ ಅಧಿಕಾರಿಗಳು ವೇತನ ಪಾವತಿ ಮಾಡುತ್ತಿಲ್ಲ ಎಂದು ನೌಕರರ ಕೂಟದ ಗೌರವಾಧ್ಯಕ್ಷ ಪಿ.ಎಚ್.ನೀರಲಕೇರಿ ಆರೋಪಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next