Advertisement

ಆ.2ರಂದು ಮಣಿಪುರ ಹಿಂಸಾಚಾರ ಖಂಡಿಸಿ ಉಡುಪಿ ಸಮಾನ ಮನಸ್ಕರ ವೇದಿಕೆಯಿಂದ ಪ್ರತಿಭಟನೆ

01:26 PM Aug 01, 2023 | Team Udayavani |

ಉಡುಪಿ: ಮಣಿಪುರದಲ್ಲಿ ಕಳೆದ ನಡೆಯುತ್ತಿರುವ ಹಿಂಸಾಚಾರವನ್ನು ಖಂಡಿಸಿ ಉಡುಪಿ ಜಿಲ್ಲೆಯ ಸಮಾನ ಮನಸ್ಕರ ವೇದಿಕೆಯಿಂದ ಇದೇ ಆಗಸ್ಟ್ 2ರಂದು ಕಾಲ್ನಡಿಗೆ ಜಾಥ ಹಾಗೂ ಪ್ರತಿಭಟನಾ ಸಭೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಸಮಾನ ಮನಸ್ಕರ ವೇದಿಕೆಯ ಸಂಚಾಲಕ ಪ್ರಶಾಂತ ಜತ್ತನ್ನ ತಿಳಿಸಿದ್ದಾರೆ.

Advertisement

ಉಡುಪಿಯಲ್ಲಿಂದು ಕರೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಲ್ನಡಿಗೆ ಜಾಥವು ಆ.2ರ ಮಧ್ಯಾಹ್ನ 2 ಗಂಟೆಗೆ ನಗರದ ಶೋಕಮಾತಾ ಇಗರ್ಜಿ ಆವರಣದಿಂದ ಪ್ರಾರಂಭವಾಗಿದ್ದು, ಬಸ್ ನಿಲ್ದಾಣ, ಕೆಎಂ ಮಾರ್ಗ, ಕೋರ್ಟ್ ರೋಡ್ ಮೂಲಕ ಸಾಗಿ ಮಿಷನ್ ಕಾಂಪೌಂಡ್‌ನಲ್ಲಿ ಮುಕ್ತಾಯಗೊಳ್ಳಲಿದೆ ಎಂದರು.

ಸಂಜೆ 4 ಗಂಟೆಗೆ ಕ್ರಿಶ್ಚಿಯನ್ ಹೈಸ್ಕೂಲ್ ಮೈದಾನದಲ್ಲಿ ಪ್ರತಿಭಟನಾ ಸಭೆ ನಡೆಯಲಿದ್ದು, ಪ್ರತಿಭಟನಾ ಸಭೆಯಲ್ಲಿ ಸುಮಾರು 7 ಸಾವಿರ ಮಂದಿ ಭಾಗವಹಿಸುವ ನಿರೀಕ್ಷೆ ಇದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next