Advertisement

ಬೆಳಗಾವಿಯಲ್ಲಿ ಪ್ರತಿಭಟನೆ ಮುಗಿದ ಬಳಿಕ ವಾಹನಗಳ ಮೇಲೆ ಕಲ್ಲು ತೂರಾಟ

09:57 AM Dec 18, 2019 | keerthan |

ಬೆಳಗಾವಿ: ಪೌರತ್ವ ಕಾಯ್ದೆ ವಿರೋಧಿಸಿ ಮಂಗಳವಾರ ಮುಸ್ಲಿಮ್ ‌ ಸಮುದಾಯದವರು ಹಮ್ಮಿಕೊಂಡಿದ್ದ ಪ್ರತಿಭಟನೆ ಮುಗಿದ ಬಳಿಕ ಶಿವಾಜಿ ನಗರದಲ್ಲಿ ಕಿಡಿಗೇಡಿಗಳು ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ.

Advertisement

ಶಿವಾಜಿ‌ ನಗರ ಹಾಗೂ ಆರ್ ಟಿಒ ವೃತ್ತದ ಬಳಿ ಕೆಎಸ್ ಆರ್ ಟಿಸಿ ಬಸ್, ಕಾರು, ಪೆಟ್ರೋಲ್ ತುಂಬಿದ ಟ್ಯಾಂಕರ್, ಎಟಿಎಂಗಳ ಮೇಲೆ ಕಲ್ಲು ತೂರಾಟ ನಡೆಸಲಾಗಿದೆ. ಕಲ್ಲು ತೂರಾಟ ಬಳಿಕ ಈ ಪ್ರದೇಶದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಭಯಭೀತಗೊಂಡ ಅಂಗಡಿಕಾರರು ಅಂಗಡಿ-ಮುಂಗಟ್ಟುಗಳನ್ನು ಮುಚ್ಚಿದ್ದಾರೆ.

ಶಿವಾಜಿ ನಗರ ಹಾಗೂ ಆರ್ ಟಿಒ ವೃತ್ತದ ಬಳಿ ಬಿಗಿ ಪೊಲೀಸ್ ಬಂದೋಬಸ್ತ್ ನಿಯೋಜಿಸಲಾಗಿದೆ.‌ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಬೀಡು ಬಿಟ್ಟಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next