Advertisement

ಬಿಳಿನೆಲೆ ಅಕ್ರಮ ಶೆಡ್ ನಿರ್ಮಾಣ ವಿಚಾರ: ಇಂದಿನಿಂದ ರಾತ್ರಿಯೂ ಸತ್ಯಾಗ್ರಹ ಮುಂದುವರಿಕೆ !

12:14 PM Aug 13, 2020 | keerthan |

ಸುಬ್ರಹ್ಮಣ್ಯ: ಬಿಳಿನೆಲೆ ಗ್ರಾಮದ ಬಿಳಿನೆಲೆ ಪೇಟೆಯಲ್ಲಿ ನಿರ್ಮಿಸಲಾದ ಅಕ್ರಮ ಶೆಡ್ ನ್ನು ತೆರವುಗೊಳಿಸುವಂತೆ ಆಗ್ರಹಿಸಿ ಪ್ರಾರಂಬಿಸಿದ ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ.

Advertisement

ಇಂದು ಬೆಳಿಗ್ಗೆ 9 ಗಂಟೆಗೆ ಪ್ರತಿಭಟನೆ ಆರಂಭಗೊಂಡಿದ್ದು, ಇಂದಿನಿಂದ ರಾತ್ರಿಯೂ ಸತ್ಯಾಗ್ರಹ ಮುಂದುವರಿಯಲಿದ್ದು, ಶೆಡ್ ತೆರವುಗೊಳಿಸುವಲ್ಲಿವರೆಗೆ ಸತ್ಯಾಗ್ರಹ ಮುಂದುವರಿಸಲಾಗುವುದು. ಹಾಗೂ ಯಾವುದೇ ಅನಾಹುತಗಳು ನಡೆದಲ್ಲಿ ಅಧಿಕಾರಿಗಳೇ ಹೊಣೆಗಾರರು ಎಂದು ಸತ್ಯಾಗ್ರಹ ನಿರತರು ತಿಳಿಸಿದ್ದಾರೆ.

ಅನ್ನಪೂರ್ಣ ಹಾಗೂ ಅವರ ಪತಿ ಗಿರಿಯಪ್ಪ, ಮಕ್ಕಳಾದ ಚೇತನ್ , ಚೇತಕ್  ಅವರು ಬಿಳಿನೆಲೆ ಗ್ರಾಮ ಪಂಚಾಯತ್ ಜಗಲಿಯಲ್ಲಿ ಉಪವಾಸ ಸತ್ಯಾಗ್ರಹದಲ್ಲಿ ನಿರತರಾಗಿದ್ದಾರೆ. ಇವರಿಗೆ ಗ್ರಾಮದ ಪ್ರಮುಖರಾದ ಸುಧೀರ್ ಕುಮಾರ್, ಶಾರದಾ ದಿನೇಶ್ ಸೇರಿದಂತೆ ಬೆಂಬಲ ಸೂಚಿಸಿ ಸ್ಥಳದಲ್ಲಿ ಹಾಜರಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next