Advertisement

ಚಿಕ್ಕಬಳ್ಳಾಪುರದಲ್ಲೂ ಡಿಕೆಶಿ ಪರ ಪ್ರತಿಭಟನೆಯ ಬಿಸಿ: ಹೆದ್ದಾರಿ ತಡೆಗೆ ಕೈ ನಾಯಕರ ಯತ್ನ

01:10 PM Sep 04, 2019 | keerthan |

ಚಿಕ್ಕಬಳ್ಳಾಪುರ; ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನ ಖಂಡಿಸಿ ಚಿಕ್ಕಬಳ್ಳಾಪುರ ಜಿಲ್ಲಾ ಕೇಂದ್ರದಲ್ಲಿ ನೂರಾರು ಕಾಂಗ್ರೆಸ್ ಕಾರ್ಯಕರ್ತರು ಬೀದಿಗಿಳಿದು ಪ್ರತಿಭಟನೆ ನಡೆಸುತ್ತಿದ್ದಾರೆ.

Advertisement

ಮಾಜಿ ಸಚಿವರಾದ ಶಿಡ್ಲಘಟ್ಟ ಶಾಸಕ ವಿ.ಮುನಿಯಪ್ಪ ನೇತೃತ್ವದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ನಗರದ ಅಂಬೇಡ್ಕರ್ ವೃತ್ತದಲ್ಲಿ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.

ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ದ ಧಿಕ್ಕಾರ ಕೂಗಿದ ಪ್ರತಿಭಟನಾಕಾರರು, ಕೇಂದ್ರ ಸರ್ಕಾರ ತನಿಖಾ ಸಂಸ್ಥೆಗಳನ್ನು ದುರ್ಬಳಕೆ ಮಾಡಿಕೊಳ್ಳುತ್ತಿವೆ ಎಂದು ಆರೋಪಿಸಿದರು.

ಹೆದ್ದಾರಿ ತಡೆಗೆ ಯತ್ನ
ಡಿ.ಕೆ.ಶಿವಕುಮಾರ್ ಬಂಧನ ಖಂಡಿಸಿ ಇಂದು ಬೆಳಗ್ಗೆ ಬೆಂಗಳೂರು ಹೈದರಾಬಾದ್ ನಡುವಿನ ರಾಷ್ಟ್ರೀಯ ಹೆದ್ದಾರಿ ತಡೆಗೆ ಕಾಂಗ್ರೆಸ್ ಕಾರ್ಯಕರ್ತರು ಯತ್ನಿಸಿದರು. ಆದರೆ ಪೊಲೀಸರು ಅದಕ್ಕೆ ಅವಕಾಶ ಕೊಡದೇ ಅಲ್ಲಿಂದ ಪ್ರತಿಭಟನಾಕಾರನ್ನು ಚದುರುಸಿದರು.

ಕೈ ಪ್ರತಿಭಟನೆಗೆ ದಳ ಸಾಥ್
ಚಿಕ್ಕಬಳ್ಳಾಪುರದಲ್ಲಿ ಕಾಂಗ್ರೆಸ್ ನಡೆಸಿದ ಪ್ರತಿಭಟನೆಯಲ್ಲಿ ಜೆಡಿಎಸ್ ಕಾರ್ಯಕರ್ತರು ಪಾಲ್ಗೊಂಡು ಡಿಕೆಶಿ ಪರ ಜೈಕಾರಗಳನ್ನು ಕೂಗಿದರು.
ಪ್ರತಿಭಟನೆಯಲ್ಲಿ ಮಾಜಿ ಶಾಸಕರಾದ ಎಸ್.ಎಂ.ಮುನಿಯಪ್ಪ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೇಶವರೆಡ್ಡಿ, ಜಿಪಂ ಅಧ್ಯಕ್ಷ ಹೆಚ್ ವಿ.ಮಂಜುನಾಥ, ಪಕ್ಷದ ಮುಖಂಡರಾದ ಜಿ.ಹೆಚ್.ನಾಗರಾಜ್, ಯಲುವಹಳ್ಳಿ ನಾಗರಾಜ್, ಕೆಪಿಸಿಸಿ ಸದಸ ಎಸ್.ಪಿ.ಶ್ರೀನಿವಾಸ್ , ಕುಂದಲಗುರ್ಕಿ ಮುನೀಂದ್ರ, ಅಡ್ಡಗಲ್ ಶ್ರೀದರ್ ಹಾಗೂ ಜೆಡಿಎಸ್ ಮುಖಂಡರಾದ ಲಾಯರ್ ನಾರಾಯಸ್ವಾಮಿ, ಬಾಲಕುಂಟಹಳ್ಳಿ ಮುನಿಯಪ್ಪ, ವಿನಯ್ ಶ್ಯಾಮ್ ,ಬಿ ಎಸ್.ರಫೀವುಲ್ಲಾ, ಸುನಿಲ್ ಕುಮಾರ್ ಸೇರಿದಂತೆ ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಭಾಗವಹಿಸಿದ್ದಾರೆ.

Advertisement

ಜಿಲ್ಲಾಧ್ಯಂತ ಪ್ರತಿಭಟನೆ
ಡಿಕೆಶಿ ಬಂಧನ ಖಂಡಿಸಿ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ. ಶಿಡ್ಲಘಟ್ಟ, ಗೌರಿಬಿದನೂರು ಮತ್ತಿತರ ಕಡೆ ಕಾಂಗ್ರೆಸ್‌ ಪಕ್ಷದ ಕಾರ್ಯಕರ್ತರು ಕೇಂದ್ರದ ವಿರುದ್ದ ದಿಕ್ಕಾರಗಳನ್ನು ಕೂಗಿ ಪ್ರತಿಭಟನೆ ನಡೆಸುತ್ತಿದ್ದಾರೆ.

ಜಿಲ್ಲೆಯಲ್ಲಿ ಪೊಲೀಸ್ ಭದ್ರತೆ
ಮಾಜಿ ಸಚಿವ ಡಿ ಕೆ ಶಿವಕುಮಾರ್ ಬಂಧನದ ಹಿನ್ನಲೆಯಲ್ಲಿ ಪೊಲೀಸರು ಮುಂಜಾಗ್ರತಾ ಕ್ರಮವಾಗಿ ಬಿಗಿ ಭದ್ರತೆ ಕೈಗೊಂಡಿದ್ದಾರೆ.

Advertisement

Udayavani is now on Telegram. Click here to join our channel and stay updated with the latest news.

Next