Advertisement

ಅತ್ಯಾಚಾರಿ ಆರೋಪಿ ಎನ್‌ಕೌಂಟರ್‌ ಮಾಡಿ

06:38 PM Feb 18, 2021 | Team Udayavani |

ಬಾಗಲಕೋಟೆ: ಜಿಲ್ಲೆಯ ಮುಧೋಳ ತಾಲೂಕಿನ ವಜ್ಜರಮಟ್ಟಿಯ ಪ್ರತಿಭಾವಂತ ವಿದ್ಯಾರ್ಥಿಯನ್ನು ಅತ್ಯಾಚಾರವೆಸಗಿ ಕೊಲೆ ಮಾಡಿದ ಆರೋಪಿಯನ್ನು ಎನ್‌ ಕೌಂಟರ್‌ ಮಾಡುವಂತೆ ಹಿಂದು ಜಾಗರಣ ವೇದಿಕೆ ಒತ್ತಾಯಿಸಿದೆ.

Advertisement

ಬುಧವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ, ಅಪರ ಜಿಲ್ಲಾಧಿಕಾರಿ ಮಹಾದೇವ ಮುರಗಿ ಅವರ ಮೂಲಕ ಗೃಹ ಸಚಿವರಿಗೆ ಮನವಿ ಸಲ್ಲಿಸಿತು. ಪ್ರತಿಭಟನೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಅಶೋಕ ಮುತ್ತಿನಮಠ, ಶಂಕರಗೌಡ ಪಾಟೀಲ, ಕುಮಾರಸ್ವಾಮಿ ಹಿರೇಮಠ ಮಾತನಾಡಿ, ಇಂತಹ ಲವ್‌ ಜಿಹಾದ್‌ ಘಟನೆಗಳನ್ನು ತಡೆಗಟ್ಟಬೇಕು. ಅತ್ಯಾಚಾರ ಮಾಡಿ, ಕೊಲೆ ಮಾಡಿದ ಕಲಾದಗಿಯ ಮುಸ್ಲಿಂ ಯುವಕನ ವಿರುದ್ಧ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

ಹಿಂದೂ ಜಾಗರಣ ವೇದಿಕೆಯ ಜಿಲ್ಲಾ ಅಧ್ಯಕ್ಷ ಆನಂದ ಮುತ್ತಗಿ, ಪ್ರಮುಖರಾದ ಬಸವರಾಜ ಕಟಗೇರಿ,  ವಿಜಯ ಸುಲಾಖೆ, ಶಿವಕುಮಾರ ಮೇಲಾ°ಡ, ರಾಜು ನಾಯಕ, ಪರಶುರಾಮ ತಳವಾರ, ಕವಿ ಕಂಬಾರ ಮುಂತಾದವರು ಪಾಲ್ಗೊಂಡಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next