Advertisement

ತ್ರಿಪುರಾ ಘಟನೆ ಖಂಡಿಸಿ ಪ್ರತಿಭಟನೆ

10:42 AM Nov 12, 2021 | Team Udayavani |

ಚಿಂಚೋಳಿ: ಕೇಂದ್ರ ಮತ್ತು ರಾಜ್ಯ ಆಡಳಿತ ಬಿಜೆಪಿ ಸರಕಾರದಲ್ಲಿ ಅಲ್ಪಸಂಖ್ಯಾತರ ಮುಸ್ಲಿಮರ ಸಮುದಾಯಗಳ ಮೇಲೆ ದೌರ್ಜನ್ಯ ಹಲ್ಲೆ ಆಸ್ತಿಹಾನಿ ಆಗುತ್ತಿರುವುದನ್ನು ಖಂಡಿಸಿ ಪಟ್ಟಣದಲ್ಲಿ ವಿವಿಧ ಸಂಘಟನೆಗಳ ಮುಸ್ಲಿಮ್‌ ಸಮುದಾಯಗಳ ಮುಖಂಡರು ತಹಶೀಲ್ದಾರ್‌ ಕಚೇರಿ ಮುಂದೆ ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

Advertisement

ಮುಸ್ಲಿಮ್‌ ಸಮಾಜದ ಹಿರಿಯ ಮುಖಂಡ ಎಂ.ಎ. ಖುದ್ದುಸ್‌ ಮಾತನಾಡಿ, ಕೇಂದ್ರ ಸರಕಾರ ತಮ್ಮ ವೈಫಲ್ಯತೆಗಳನ್ನು ಮುಚ್ಚಿಕೊಳ್ಳುವುದಕ್ಕೆ ಮತ್ತು ಜನರ ಗಮನ ಬೇರೆಡೆ ಸೆಳೆಯುವುದಕ್ಕಾಗಿ ದೇಶದಲ್ಲಿ ಮುಸ್ಲಿಮರ ಮೇಲೆ ದೌರ್ಜನ್ಯಗಳು ನಡೆಯುತ್ತಿವೆ. ದೇಶದಲ್ಲಿ ಬಿಜೆಪಿ ಅ ಧಿಕಾರಕ್ಕೆ ಬಂದ ನಂತರ ಆರ್ಥಿಕ ಸಂಪೂರ್ಣ ಹದಗೆಟ್ಟಿದೆ. ಯುವಕರಿಗೆ ಉದ್ಯೋಗ ಇಲ್ಲ, ತ್ರಿಪುರ ರಾಜ್ಯದಲ್ಲಿ ಜಾತಿ ಧರ್ಮಗಳ ಮಧ್ಯೆ ಕೋಮುವಾದ ಗಲಭೆ ಸೃಷ್ಟಿಸುತ್ತಿದೆ. ಆಸ್ತಿಪಾಸ್ತಿ ಹಾನಿ ಉಂಟು ಮಾಡಲಾಗುತ್ತಿದೆ ಎಂದು ಆರೋಪಿಸಿದರು.

ಬ್ಲಾಕ್‌ ಕಾಂಗ್ರೆಸ್‌ ಅಧ್ಯಕ್ಷ ಬಸವರಾಜ ಮಲಿ, ಜೆಡಿಎಸ್‌ ಅಧ್ಯಕ್ಷ ರವಿಶಂಕರರೆಡ್ಡಿ ಮುತ್ತಂಗಿ, ಗೋಪಾಲರಾವ ಕಟ್ಟಿಮನಿ, ಪುರಸಭೆ ಸದಸ್ಯ ಅಬ್ದುಲ್‌ ಬಾಸೀತ, ಮಾರುತಿ ಗಂಜಗಿರಿ, ಪುರಸಭೆ ಉಪಾಧ್ಯಕ್ಷ ಶಬ್ಬೀರ ಅಹೆಮದ, ಶೇಖ್‌ಫರೀದ್‌, ಶರಣ ಮೋತಕಪಳ್ಳಿ ಮಾತನಾಡಿದರು.

ಬಡಿದರ್ಗಾ ಸಜ್ಜಾದೇ ನಶಿನ್‌ ಅಕ್ಬರ ಹುಸೇನಿ ಸಾಹೇಬ ನೇತೃತ್ವದಲ್ಲಿ ಮನವಿ ಸಲ್ಲಿಸಲಾಯಿತು. ಮಸೂದ ಸೌದಾಗರ, ಮುಕ್ತಾರ, ಖಾಜಾಪಟೇಲ್‌ ಕೊಟಗಾ, ಹಸೇನ ಹಾಸ್ಮಿ, ಮಗದೂಮಖಾನ್‌, ಮಹ್ಮದ್‌ ಹಾದಿ, ಖಲೀಲ್‌ ಪಟೇಲ್‌, ಮತೀನ ಇನ್ನಿತರಿದ್ದರು.

Advertisement

Udayavani is now on Telegram. Click here to join our channel and stay updated with the latest news.

Next