Advertisement

ಸಿಬಿಐ ದಾಳಿಗೆ ಆಕ್ರೋಶ: ಸಿಎಂ ಯಡಿಯೂರಪ್ಪ ಮನೆಗೆ ಮುತ್ತಿಗೆ ಯತ್ನ

03:46 PM Oct 05, 2020 | keerthan |

ಶಿವಮೊಗ್ಗ: ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ಅವರ ಮನೆ ಮೇಲೆ ಸಿಬಿಐ ದಾಳಿ ನಡೆಸಿರುವುದು ರಾಜಕೀಯ ಪ್ರೇರಿತ ಎಂದು ಆರೋಪಿಸಿರುವ ಎನ್ ಎಸ್ ಯುಐ ಕಾರ್ಯಕರ್ತರು ನಗರದಲ್ಲಿರುವ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪನವರ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದ ಘಟನೆ ಸೋಮವಾರ ಮಧ್ಯಾಹ್ನ ನಡೆದಿದೆ.

Advertisement

ಶಿವಮೊಗ್ಗದ ವಿನೊಬನಗರದಲ್ಲಿರುವ ಸಿಎಂ ಯಡಿಯೂರಪ್ಪ ನಿವಾಸದ ಮುಂದೆ ಜಮಾಯಿಸಿದ ಎನ್ ಎಸ್ ಯುಐ ಕಾರ್ಯಕರ್ತರು ಧಿಕ್ಕಾರ ಕೂಗುತ್ತಾ ಮನೆಗೆ ಮುತ್ತಿಗೆ ಹಾಕಲು ಯತ್ನಿಸಿದರು.

ಇದನ್ನೂ ಓದಿ:ಉಪಚುನಾವಣೆ ಹೊಸ್ತಿಲಲ್ಲಿ ಸಿಬಿಐ ದಾಳಿ: ರಾಜಕೀಯ ಚದುರಂಗದಾಟದಲ್ಲಿ ಲಾಭ ಯಾರಿಗೆ?

20 ಕ್ಕೂ ಹೆಚ್ಚು ಎನ್ ಎಸ್ ಯುಐ ಕಾರ್ಯಕರ್ತರಿಂದ ಕಪ್ಪುಪಟ್ಟಿ ಧರಿಸಿ ಮುತ್ತಿಗೆ ಯತ್ನ ನಡೆಸಿದ್ದರು. ಆದರೆ ಮೊದಲೇ ಮಾಹಿತಿ ಪಡೆದಿದ್ದ ಪೊಲೀಸರು ಮುತ್ತಿಗೆ ಹಾಕಲು ಯತ್ನಿಸಿದವರನ್ನು ತಡೆದು ವಶಕ್ಕೆ ಪಡೆದರು.‌

Advertisement

ಇದನ್ನೂ ಓದಿ:ಕಾಂಗ್ರೆಸ್ ತನ್ನ ಅಹಂಕಾರ ಮುಂದುವರೆಸಿದರೆ ಕರ್ನಾಟಕದಲ್ಲೂ ನೆಲೆ ಕಳೆದುಕೊಳ್ಳಬಹುದು :HDK

Advertisement

Udayavani is now on Telegram. Click here to join our channel and stay updated with the latest news.

Next