Advertisement

ಕೊಚ್ಚೆ ಸುರಿದುಕೊಂಡು ಸಫಾಯಿ ಕರ್ಮಚಾರಿಗಳ ಪ್ರತಿಭಟನೆ

02:24 PM Sep 21, 2021 | Team Udayavani |

ರಾಯಚೂರು: ಗುರುತಿನ ಚೀಟಿ ನೀಡುವಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಖಂಡಿಸಿ ಸಫಾಯಿ ಕರ್ಮಚಾರಿಗಳು ಕೊಚ್ಚೆ ನೀರು ಸುರಿದುಕೊಂಡು ಪ್ರತಿಭಟನೆ ನಡೆಸಿದ ಪ್ರಸಂಗ ನಡೆಯಿತು.

Advertisement

ನಗರದ ಡಿಸಿ ಕಚೇರಿ ಎದುರು ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಜಾಗೃತಿ ಸಮಿತಿ ಸದಸ್ಯೆ ಗೀತಾ ಸಿಂಗ್ ಅವರು ಪೊಲೀಸರ ಎದುರೇ ಕೊಚ್ಚೆ ಮೈಮೇಲೆ ಸುರಿದುಕೊಂಡರು. ಕೂಡಲೇ ಅವರನ್ನು ವಶಕ್ಕೆ ಪಡೆದ ಪೊಲೀಸರು ಭದ್ರತೆಯಲ್ಲಿ ಮನೆಗೆ ಕರೆದು ಕೊಂಡು ಹೋದರು.

ಇದನ್ನೂ ಓದಿ:ಹಿಂದೂವಿರೋಧಿ ಬೊಮ್ಮಾಯಿಯವರನ್ನು ಸಿಎಂ ಸ್ಥಾನದಿಂದ ಕೆಳಗಿಳಿಸಿ: ಶ್ರೀರಾಮ ಸೇನೆ ರಾಜ್ಯಾಧ್ಯಕ್ಷ

ಆದರೆ, ಅವರ ಸಮಸ್ಯೆಗಳ ಕುರಿತು ಚರ್ಚಿಸಲು ಡಿಸಿ ಸಭೆ ಕರೆದಿದ್ದು, ಪ್ರತಿಭಟನಾಕಾರರ ಗಮನಕ್ಕೆ ಬಂದಿಲ್ಲ ಎಂದು ತಿಳಿದು ಬಂದಿದೆ. ಕೊನೆಗೆ ಸ್ನಾನ ಮಾಡಿ ಬಂದ ಮೇಲೆ ಡಿಸಿ ಜತೆ ಸಭೆಯಲ್ಲಿ ಪಾಲ್ಗೊಂಡರು.

Advertisement

Udayavani is now on Telegram. Click here to join our channel and stay updated with the latest news.

Next