Advertisement

ಸ್ಮಶಾನ ಭೂಮಿ ಮಂಜೂರಿಗೆ ಆಗ್ರಹಿಸಿ ಗ್ರಾಮಸ್ಥರ ಪ್ರತಿಭಟನೆ

02:43 PM Jul 10, 2019 | Team Udayavani |

ಬೆಳಗಾವಿ: ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಸಮುದಾಯದವರಿಗೆ ಸ್ಮಶಾನ ಭೂಮಿ ಮಂಜೂರು ಮಾಡುವಂತೆ ಆಗ್ರಹಿಸಿ ಹುಕ್ಕೇರಿ ತಾಲೂಕಿನ ಹಂಚಿನಾಳ ಗ್ರಾಮಸ್ಥರು ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿ ಮನವಿ ಸಲ್ಲಿಸಿದರು.

Advertisement

ಹಂಚಿನಾಳ ಗ್ರಾಮದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೊರವರ, ಬೇಡರ ಮತ್ತು ಮಾದರ ಸಮುದಾಯದ ಸುಮಾರು 150 ಮನೆಗಳ ಕುಟುಂಬಸ್ಥರು ವಾಸವಾಗಿದ್ದಾರೆ. ಈ ಕುಟುಂಬಗಳಿಗೆ ನಿಗದಿತ ಸ್ಮಶಾನ ಜಾಗ ಇಲ್ಲವಾಗಿದೆ ಎಂದು ಅಳಲು ತೋಡಿಕೊಂಡರು.

ಸುಮಾರು ನಾಲ್ಕು ತಲೆಮಾರುಗಳಿಂದಲೂ ಗ್ರಾಮದ ಶಂಕರ ಬಡಕುಂದ್ರಿ ಮತ್ತು ಬಾಬು ಬಡಕುಂದ್ರಿ ಎನ್ನುವವರ ಜಮೀನಿನಲ್ಲಿ ಅಂತ್ಯಕ್ರಿಯೆ ನಡೆಸುತ್ತಾ ಬರಲಾಗಿದೆ. ಆದರೆ ಇದೀಗ ಜಮೀನಿನ ಮಾಲೀಕರು ಅವರ ಜಮೀನಿನಲ್ಲಿ ಶವಸಂಸ್ಕಾರ ಮಾಡಲು ತಕರಾರು ಮಾಡುತ್ತಿದ್ದಾರೆ. ಹೀಗಾಗಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಕೊರವರ, ಬೇಡರ ಮತ್ತು ಮಾದರ ಸಮುದಾಯದ ಜನರಿಗೆ ಶವಸಂಸ್ಕಾರ ಮಾಡಲು ಸ್ಥಳ ಇಲ್ಲದಿರುವುದರಿಂದ ಸಮಸ್ಯೆ ಎದುರಾಗಿದೆ. ಹೀಗಾಗಿ ಸಮುದಾಯಕ್ಕೆ ಸ್ಮಶಾನ ಜಮೀನು ಕೊಡಿಸಲು ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದರು.

Advertisement

Udayavani is now on Telegram. Click here to join our channel and stay updated with the latest news.

Next