Advertisement

ಬ್ಯಾಂಕ್‌ ಖಾಸಗೀಕರಣ ವಿರೋಧಿಸಿ ಡಿ.16, 17ರಂದು ಪ್ರತಿಭಟನೆ

07:32 PM Dec 15, 2021 | Team Udayavani |

ಬೆಂಗಳೂರು: ರಾಜ್ಯ ಬ್ಯಾಂಕ್‌ ಸಂಘಟನೆಗಳ ಐಕ್ಯ ವೇದಿಕೆ ವತಿಯಿಂದ ರಾಷ್ಟ್ರೀಯ ಬ್ಯಾಂಕ್‌ಗಳ ಖಾಸಗೀಕರಣ ನಿಲ್ಲಿಸುವಂತೆ ಒತ್ತಾಯಿಸಿ ಡಿ.16, 17ರಂದು ಬೆಳಗ್ಗೆ 10.30ಕ್ಕೆ ನಗರದ ಮೈಸೂರು ಬ್ಯಾಂಕ್‌ ವೃತ್ತದಲ್ಲಿ ಪ್ರತಿಭಟನೆ ನಡೆಯಲಿದೆ ಎಂದು ರಾಜ್ಯ ಬ್ಯಾಂಕ್‌ ಸಂಘಟನೆಗಳ ಐಕ್ಯ ವೇದಿಕೆ ಕಾರ್ಯದರ್ಶಿ ಶ್ರೀನಿವಾಸ್‌ ತಿಳಿಸಿದರು.

Advertisement

ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಬ್ಯಾಂಕ್‌ಗಳ ಖಾಸಗೀಕರಣ ಎಂದರೇ ದೇಶದ ಹಣಕಾಸು ಕ್ಷೇತ್ರವನ್ನು ದೇಶಿ-ವಿದೇಶಿ ಬಂಡವಾಳಗಾರರಿಗೆ ಒಪ್ಪಿಸುವುದು ಎಂದರ್ಥ. ಜನರ ಉಳಿತಾಯದ ಹಣದ ಲೂಟಿಗೆ ಅವಕಾಶ, ಠೇವಣಿದಾರರ ಹಿತಾಸಕ್ತಿಗೆ ಧಕ್ಕೆ, ಉದ್ಯೋಗಾವಕಾಶಗಳ ಹಾಗು ಮೀಸಲಾತಿಯಂತಹ ಸಾಮಾಜಿ ನ್ಯಾಯಕ್ಕೆ ಧಕ್ಕೆಯಾಗುವುದರ ಜತೆಗೆ ಶಾಖೆಗಳ ಮುಚ್ಚುವಿಕೆ, ಜನಸಾಮಾನ್ಯರು ಬ್ಯಾಂಕಿಂಗ್‌ ಸೇವೆಗಳಿಂದ ವಂಚಿತರಾಗಲಿದ್ದಾರೆ ಎಂದು ಆತಂಕ ವ್ಯಕ್ತಪಡಿಸಿದರು.

ಖಾಸಗೀಕರಣ ಉದ್ಯೋಗ ಕಡಿತ:

ಸಾರ್ವಜನಿಕ ವಲಯದ ಖಾಸಗಿಕರಣ ಮತ್ತು ಬಂಡವಾಳ ಹಿಂತೆಗೆತ ತಂತ್ರಗಾರಿಕೆ ನೀತಿ ಒಂದು ಭಾಗವಾಗಿದೆ. 1991ರಿಂದಲೂ ಆಡಳಿತ ಸರಕಾರಗಳು 5.30 ಲ.ಕೋಟಿ ಮೌಲ್ಯದ ಸರಕಾರದ ಸ್ವಾಮಯದ ಷೇರು ಗಳನ್ನು ಇಂದಿನವರೆಗೂ ಮಾರಾಟ ಮಾಡಿದೆ. ಇದರಲ್ಲಿ ಶೇ.70ರಷ್ಟು ಬಂಡವಾಳ ಹಿಂತೆಗೆದುಕೊಂಡಿದೆ ಎಂದರು.

Advertisement

Udayavani is now on Telegram. Click here to join our channel and stay updated with the latest news.

Next